Advertisement

ಕೇಂದ್ರ ಅಧಿಕಾರಿಗಳಿಂದ ವೀಕ್ಷಣೆ

11:59 AM Sep 15, 2018 | Team Udayavani |

ಸುಬ್ರಹ್ಮಣ್ಯ : ಅತಿವೃಷ್ಟಿ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸುತ್ತಿರುವ ಕೇಂದ್ರದ ಅಧಿಕಾರಿಗಳ ತಂಡ ಗುರುವಾರ ಸುಬ್ರಹ್ಮಣ್ಯ-ಜಾಲ್ಸೂರು-ಸುಳ್ಯ-ಮಡಿಕೇರಿ ರಾಜ್ಯ ಹೆದ್ದಾರಿಯ ಕಲ್ಲಾಜೆ ಬಳಿ ರಸ್ತೆ ಕುಸಿತ ನಡೆದ ಸ್ಥಳವನ್ನು ವೀಕ್ಷಿಸಿತು.

Advertisement

ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಅವರು ಈ ರಸ್ತೆಯ ಪ್ರಾಮುಖ್ಯ, ಈ ರಸ್ತೆ ಮೇಲಿರುವ ಸಂಚಾರ ಒತ್ತಡದ ಕುರಿತು ಅಧಿಕಾರಿಗಳ ಗಮನಕ್ಕೆ ತಂದರು. ವೀಕ್ಷಣ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಉಪಕಾರ್ಯದರ್ಶಿ ಭರತೇಂದು ಕುಮಾರ್‌ ಸಿಂಗ್‌, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ಮಾಣಿಕ್‌ ಚಂದ್‌ ಪಂಡಿತ್‌, ರಸ್ತೆ ಸಾರಿಗೆ, ಹೆದ್ದಾರಿ ಇಲಾಖೆಯ ಪ್ರಾದೇಶಿಕ ಅಧಿಕಾರಿ ಸದಾನಂದ ಬಾಬು, ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಸುಳ್ಯ ತಹಶೀಲ್ದಾರ್‌ ಕುಂಞಮ್ಮ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಅಧಿಕಾರಿಗಳ ತಂಡ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಅನ್ನಪ್ರಸಾದ ಸ್ವೀಕರಿಸಿದ ಬಳಿಕ ಶಿರಾಡಿ ಘಾಟಿ ರಾ. ಹೆದ್ದಾರಿ ವೀಕ್ಷಣೆಗೆ ತೆರಳಿತು.

Advertisement

Udayavani is now on Telegram. Click here to join our channel and stay updated with the latest news.

Next