Advertisement

ಇಂದು ವಿಜಯ್ ದಿವಸ್: ಯೋಧರ ತ್ಯಾಗ, ಬಲಿದಾನ ಸ್ಮರಿಸಿದ ಗಣ್ಯರು

01:38 PM Jul 26, 2022 | Team Udayavani |

ಬೆಂಗಳೂರು: ನೆರೆ ರಾಷ್ಟ್ರ ಪಾಕಿಸ್ಥಾನ ವಿರುದ್ಧ ಜಮ್ಮು ಕಾಶ್ಮೀರ ಕಾರ್ಗಿಲ್ ನಲ್ಲಿ ನಡೆದ ಯುದ್ಧದಲ್ಲಿ ವಿಜಯ ಸಾಧಿಸಿದ ದಿನವನ್ನು (ಜು.26) ವಿಜಯ ದಿವಸ್ ಎಂದು ಆಚರಿಸಲಾಗುತ್ತದೆ. ಕಾರ್ಗಿಲ್ ಯದ್ದದ ಜಯದ ದಿನ ಹಿನ್ನೆಲೆಯಲ್ಲಿ ರಾಜ್ಯದ ಗಣ್ಯರು ಯೋಧರ ತ್ಯಾಗ, ಬಲಿದಾನಗಳನ್ನು ಸ್ಮರಿಸಿದ್ದಾರೆ.

Advertisement

ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಕಾರ್ಗಿಲ್ ವಿಜಯ ದಿವಸದಂದು ಗೌರವಪೂರ್ಣ ನಮನಗಳು. ಹುತಾತ್ಮ ಯೋಧರ ಅಪ್ರತಿಮ ಶೌರ್ಯ, ಸಾಹಸ, ತ್ಯಾಗ, ಬಲಿದಾನಗಳನ್ನು ಈ ದೇಶ ಸದಾ ಸ್ಮರಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Koo App

ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ಕಾರ್ಗಿಲ್ ವಿಜಯ ದಿವಸದಂದು ಗೌರವಪೂರ್ಣ ನಮನಗಳು. ಹುತಾತ್ಮ ಯೋಧರ ಅಪ್ರತಿಮ ಶೌರ್ಯ, ಸಾಹಸ, ತ್ಯಾಗ, ಬಲಿದಾನಗಳನ್ನು ಈ ದೇಶ ಸದಾ ಸ್ಮರಿಸಲಿದೆ. #KargilVijayDiwas2022

Basavaraj Bommai (@bsbommai) 26 July 2022

Advertisement

ಭಾರತೀಯ ಸೈನಿಕರು ಅಪರೇಶನ್ ವಿಜಯ್ ಮೂಲಕ ಕಾರ್ಗಿಲ್‌-ಡ್ರಾಸ್‌ ವಲಯದಲ್ಲಿ ಪ್ರದರ್ಶಿಸಿದ ಶೌರ್ಯದ ನೆನಪಿಗಾಗಿ ಈ ದಿನವನ್ನು ಕಾರ್ಗಿಲ್ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. ಸಮರದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ನಮನಗಳನ್ನು ಸಲ್ಲಿಸುತ್ತಾ, ನಮ್ಮ ಸೇನಾಪಡೆಗಳಿಗೆ ಅಭಿನಂದನೆಗಳನ್ನು ಸಲ್ಲಿಸೋಣ. ಜೈ ಹಿಂದ್ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿದ್ದಾರೆ.

ಇಂದು ನಾವೆಲ್ಲ ನೆಮ್ಮದಿಯಾಗಿ ಜೀವನವನ್ನು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ವೀರ ಸೈನಿಕರ ತ್ಯಾಗ, ಬಲಿದಾನ, ಕಠಿಣ ಪರಿಶ್ರಮವೇ ಪ್ರಮುಖ ಕಾರಣ. ಶತ್ರುಗಳನ್ನು ಸದೆಬಡೆದು ಭಾರತ ಮಾತೆಯನ್ನು ಪ್ರತಿಕ್ಷಣವೂ ಉಳಿಸುವ ನಮ್ಮ ಯೋಧರ ಉದಾತ ಸೇವೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಕಾರ್ಗಿಲ್ ವೀರರನ್ನು ನೆನೆದು ವಂದಿಸುತ್ತಿದ್ದೇನೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

Koo App

ಇಂದು ನಾವೆಲ್ಲ ನೆಮ್ಮದಿಯಾಗಿ ಜೀವನವನ್ನು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ವೀರ ಸೈನಿಕರ ತ್ಯಾಗ, ಬಲಿದಾನ, ಕಠಿಣ ಪರಿಶ್ರಮವೇ ಪ್ರಮುಖ ಕಾರಣ. ಶತ್ರುಗಳನ್ನು ಸದೆಬಡೆದು ಭಾರತ ಮಾತೆಯನ್ನು ಪ್ರತಿಕ್ಷಣವೂ ಉಳಿಸುವ ನಮ್ಮ ಯೋಧರ ಉದಾತ ಸೇವೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ ಕಾರ್ಗಿಲ್ ವೀರರನ್ನು ನೆನೆದು ವಂದಿಸುತ್ತಿದ್ದೇನೆ. @BJP4Karnataka

Dr. Murugesh R Nirani (@murugesh_nirani) 26 July 2022

ಇಂದು ಕಾರ್ಗಿಲ್ ವಿಜಯ ದಿನ. ಗಡಿಯೊಳಕ್ಕೆ ನುಸುಳಿ ನಮ್ಮ ಭೂಮಿಯನ್ನು ಆಕ್ರಮಿಸಿದ ಶತ್ರುಗಳನ್ನು ಸೆದೆಬಡಿದು ಮಾತೃಭೂಮಿಯನ್ನು ರಕ್ಷಿಸಿದ ವೀರಯೋಧರಿಗೆ ನನ್ನ ಶತ ನಮನಗಳು. ಅಪ್ರತಿಮ ಕೆಚ್ಚಿನಿಂದ ಹೋರಾಡಿದ ನಮ್ಮ ಸೇನಾಪಡೆಗಳ ಕರ್ತವ್ಯನಿಷ್ಠೆ, ಶೌರ್ಯ, ಪರಾಕ್ರಮಗಳಿಗೆ ಜೈಹೋ.. ಹುತಾತ್ಮರಾದ ವೀರಪುತ್ರರಿಗೆ ಭಾವಪೂರ್ವಕ ಶ್ರದ್ಧಾಂಜಲಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Koo App

ಇಂದು ಕಾರ್ಗಿಲ್ ವಿಜಯ ದಿನ. ಗಡಿಯೊಳಕ್ಕೆ ನುಸುಳಿ ನಮ್ಮ ಭೂಮಿಯನ್ನು ಆಕ್ರಮಿಸಿದ ಶತ್ರುಗಳನ್ನು ಸೆದೆಬಡಿದು ಮಾತೃಭೂಮಿಯನ್ನು ರಕ್ಷಿಸಿದ ವೀರಯೋಧರಿಗೆ ನನ್ನ ಶತ ನಮನಗಳು. ಅಪ್ರತಿಮ ಕೆಚ್ಚಿನಿಂದ ಹೋರಾಡಿದ ನಮ್ಮ ಸೇನಾಪಡೆಗಳ ಕರ್ತವ್ಯನಿಷ್ಠೆ, ಶೌರ್ಯ, ಪರಾಕ್ರಮಗಳಿಗೆ ಜೈಹೋ.. ಹುತಾತ್ಮರಾದ ವೀರಪುತ್ರರಿಗೆ ಭಾವಪೂರ್ವಕ ಶ್ರದ್ಧಾಂಜಲಿ. #jaihind

H D Kumaraswamy (@h_d_kumaraswamy) 26 July 2022

Advertisement

Udayavani is now on Telegram. Click here to join our channel and stay updated with the latest news.

Next