Advertisement

Kannada Cinema; ‘ರಿಪ್ಪನ್ ಸ್ವಾಮಿ’ಯಾದ ವಿಜಯ ರಾಘವೇಂದ್ರ

03:18 PM Apr 12, 2024 | Team Udayavani |

ನಟ ವಿಜಯ ರಾಘವೇಂದ್ರ ಭಿನ್ನ-ವಿಭಿನ್ನ ಪಾತ್ರ, ಸಿನಿಮಾಗಳನ್ನು ಪ್ರಯತ್ನಿಸುತ್ತಲೇ ಇರುತ್ತಾರೆ. ಈಗ ಇದೇ ರೀತಿ ಹೊಸ ಗೆಟಪ್‌ನಲ್ಲಿ ಅವರು ಕಾಣಿಸಿಕೊಂಡಿರುವ ಸಿನಿಮಾವೊಂದರ ಟೈಟಲ್‌ ಪೋಸ್ಟರ್‌ ರಿಲೀಸ್‌ ಆಗಿದೆ.

Advertisement

ಸಿನಿಮಾಕ್ಕೆ “ರಿಪ್ಪನ್‌ ಸ್ವಾಮಿ’ ಎಂದು ಟೈಟಲ್‌ ಇಡಲಾಗಿದೆ. ಮಲೆನಾಡಿನ ಹಳ್ಳಿಯೊಂದರಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಪಂಚಾಂನನ ಫಿಲಂಸ್‌ ನಿರ್ಮಾಣದ ಈ ಸಿನಿಮಾವನ್ನು ಕಿಶೋರ್‌ ಮೂಡುಬಿದ್ರೆ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ “ಮಾಲ್ಗುಡಿ ಡೇಸ್‌’ ಸಿನಿಮಾ ಮಾಡಿದ್ದ ಕಿಶೋರ್‌ ಈಗ ಹೊಸ ಜಾನರ್‌ ಪ್ರಯತ್ನಿಸಿದ್ದಾರೆ.

ಚಿತ್ರದ ತಾರಾಗಣದಲ್ಲಿ ಅಶ್ವಿ‌ನಿ ಚಂದ್ರಶೇಖರ್‌, ಪ್ರಕಾಶ್‌ ತುಮ್ಮಿನಾಡು, ವಜ್ರಧೀರ್‌ ಜೈನ್‌, ಯಮುನಾ ಶ್ರೀನಿಧಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು 48 ದಿನಗಳ ಚಿತ್ರೀಕರಣವನ್ನು ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ನಡೆಸಲಾಗಿದೆ.

ಚಿತ್ರಕ್ಕೆ ಮಲಯಾಳಂನ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್‌ ಅಭಿ ಸಂಗೀತವನ್ನು ನೀಡುತ್ತಿದ್ದಾರೆ. ರಂಗನಾಥ್‌ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ. ಸದ್ಯ ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಜೂನ್‌-ಜುಲೈ ಹೊತ್ತಿಗೆ ತೆರೆಗೆ ತರುವ ಯೋಚನೆ ಚಿತ್ರತಂಡದ್ದು.

Advertisement

Udayavani is now on Telegram. Click here to join our channel and stay updated with the latest news.

Next