Advertisement

ದಲ್ಲಾಳಿಗಳ ವಿರುದ್ಧ ಕ್ರಮಕ್ಕೆ ವಿಜಯಕುಮಾರ ಆಗ್ರಹ

07:06 PM Sep 24, 2020 | Suhan S |

ಬೀದರ: ಜಿಲ್ಲೆಯ ಮುಗ್ಧ ಕಲಾವಿದರಿಗೆ ಮಾಸಾಶನ ಮಾಡಿಸಿಕೊಡುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿರುವ ದಲ್ಲಾಳಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಬೇಕು ಎಂದು ಜಿಲ್ಲಾ ಕಲಾವಿದರ ಒಕ್ಕೂಟ ಅಧ್ಯಕ್ಷ ವಿಜಯಕುಮಾರ ಸೋನಾರೆ ಆಗ್ರಹಿಸಿದ್ದಾರೆ.

Advertisement

ಈ ಕುರಿತು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಬಡ, ಮುಗª ಕಲಾವಿದರಿಗೆ ಮಾಸಾಶನ ಮಾಡಿಸುವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೊಡಿಸುವ ನೆಪದಲ್ಲಿ 3 ರಿಂದ 5 ಸಾವಿರ ರೂ. ಪಡೆಯಲಾಗುತ್ತಿದೆ. ಕೊರೊನಾ ಹಿನ್ನೆಲೆ ಸರ್ಕಾರದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಕಂಗಾಲಾಗಿರುವ ಕಲಾವಿದರಿಗೆ ಮಾಸಾಶನ ಆಸೆ ತೋರಿಸುತ್ತಿದ್ದಾರೆ. ಅವರ ಮಾತಿಗೆ ಬಡಪಾಯಿ ಕಲಾವಿದರುಗಳು ಮರುಳಾಗಿ ದುಡಿದ ಹಣವನ್ನು ಹೊಂದಿಸಿ ಕೊಟ್ಟು ಮೋಸ ಹೋಗುತ್ತಿದ್ದಾರೆ. ದಲ್ಲಾಳಿಗಳನ್ನು ಕೂಡಲೇ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಬೇಕು ಎಂದಿದ್ದಾರೆ.

ಜಿಲ್ಲೆಯ ಕಲಾವಿದರು ಯಾರಾದರೂ ಮಾಸಾಶನ ಹಾಗೂ ಸರ್ಕಾರದ ಕಾರ್ಯಕ್ರಮ ಕೊಡಿಸುವ ಬಗ್ಗೆ ಹೇಳಿ, ಹಣ ಕೇಳಿದರೆ, ಕಲಾವಿದರು ಸಮೀಪದ ಪೊಲೀಸ್‌ ಠಾಣೆಗೆ ದೂರು ನೀಡಬೇಕು ಇಲ್ಲವೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಕಲಾವಿದರ ಒಕ್ಕೂಟದ ಜಿಲ್ಲಾಧ್ಯಕ್ಷರಿಗೆ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next