Advertisement

ನಾಳೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮಂಗಳೂರಿಗೆ

10:31 AM Feb 24, 2017 | |

ಮಂಗಳೂರು: ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಫೆ. 25ರಂದು ಕರಾವಳಿ ಸೌಹಾರ್ದ ರ್ಯಾಲಿಯನ್ನು ಮಂಗಳೂರಿನಲ್ಲಿ ಹಮ್ಮಿಕೊಂಡಿದೆ. ರ್ಯಾಲಿ ಮಧ್ಯಾಹ್ನ 2.30ಕ್ಕೆ ಜ್ಯೋತಿ ಅಂಬೇಡ್ಕರ್‌ ವೃತ್ತದಿಂದ ಆರಂಭಗೊಂಡು 3.30ಕ್ಕೆ ನೆಹರೂ ಮೈದಾನದಲ್ಲಿ ಬಹಿರಂಗ ಸಭೆಯಾಗಿ ಪರಿವರ್ತನೆಯಾಗಲಿದೆ.

Advertisement

ಸಭೆಯನ್ನು ಉದ್ದೇಶಿಸಿ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್‌ ಹಾಗೂ ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಜಿ.ವಿ. ರಾಮರೆಡ್ಡಿ ಭಾಷಣ ಮಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ದ.ಕ.ಜಿಲ್ಲೆಯ ಹಿರಿಯ ಕಮ್ಯೂನಿಸ್ಟ್‌ ಮುಖಂಡ ಕೆ.ಆರ್‌. ಶ್ರೀಯಾನ್‌ ವಹಿಸಲಿದ್ದಾರೆ. ಸಿಪಿಐ ದ.ಕ-ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ. ಕುಕ್ಯಾನ್‌, ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯರಾದ ಕೆ. ಶಂಕರ್‌, ವಸಂತ ಆಚಾರಿ ಮತ್ತು ಜೆ. ಬಾಲಕೃಷ್ಣ ಶೆಟ್ಟಿ ಅವರು ಭಾಗವಹಿಸಲಿರುವರು. ಸಿಪಿಎಂ ಬೆಂಬಲಿಗರು ಬೃಹತ್‌ ಸಂಖ್ಯೆಯಲ್ಲಿ ಭಾಗವಹಿಸುವರು ಎಂಬುದಾಗಿ ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next