Advertisement

ವಿಜಯಪುರ ಪಾಲಿಕೆ ಚುನಾವಣೆ : ವಾಮಾಚಾರ ಹಾವಳಿ; ಜನರ ಆಕ್ರೋಶ

06:35 PM Oct 16, 2022 | Team Udayavani |

ವಿಜಯಪುರ: ವಿಜಯಪುರ ಮಹಾನಗರ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಈ ಹಂತದಲ್ಲಿ ಮಾಟ-ಮಂತ್ರದ ಕ್ಷುದ್ರ ಚಟುವಟಿಕೆಗಳು ತಲೆ ಎತ್ತಿದ್ದು, ಸಾರ್ವಜನಿಕರನ್ನು ಆತಂಕ ಪಡುವಂತೆ ಮಾಡಿವೆ.

Advertisement

ವಾರ್ಡ್ ನಂ. 14 ರಲ್ಲಿ ಬರುವ ನಗರದ ಶಿಖಾರಖಾನೆ ಪ್ರದೇಶದ ಅನಂತಲಕ್ಷ್ಮೀ ಹಾಲ್ ಬಳಿ ಕಿಡಿಗೇಡಿಗಳು ಮಾಟ ಮಂತ್ರ ಮಾಡಿಸಿದಂತೆ ಕುಂಕು, ಅರಿಷಿಣ, ನಿಂಬೆಹಣ್ಣು, ಎಲೆ, ಮೊಟ್ಟೆ, ಹಣ ಸೇರಿದಂತೆ ಹೂವುಗ ಳೊಂದಿಗೆ ಮಾಟ ಮಂತ್ರ ಮಾಡಿ ಎಸೆದಿದ್ದಾರೆ.

ಸದರಿ ವಾರ್ಡ್ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಇದನ್ನು ಸಹಿದ ಇತರೆ ಮೀಸಲು ನಿರೀಕ್ಷೆಯಲ್ಲಿ ಇದ್ದವರೇ ಈ ಕೃತ್ಯ ಮಾಡಿದ್ದಾರೆ ಎಂದು ಸ್ಥಳೀಯರು ದೂರಿದ್ದು, ಪೊಲೀಸರು ಜನರಲ್ಲಿ ಭಯ ಉಂಟು ಮಾಡುವ ಇಂಥ ಕೃತ್ಯಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇಂಥ ವಾಮಾಚಾರದ ಕ್ಷುದ್ರ ಕೃತ್ಯಗಳು ನಮ್ಮಲ್ಲಿ ಎಂದೂ ನಡೆದಿರಲಿಲ್ಲ. ಚುನಾವಣೆ ಘೋಷಣೆ ಬಳಿಕ ಉದ್ದೇಶಪೂರ್ವಕವಾಗಿ ಇಂಥ ಚಟುವಟಿಕೆ ಮೂಲಕ ಜನರಲ್ಲಿ ಭಯ ಉಂಟು ಮಾಡುವ ಕೃತ್ಯಕ್ಕೆ ಕೈಹಾಕಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next