Advertisement

ವಿಜಯಪುರ: ಸುಟ್ಟು ಭಸ್ಮವಾದ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ

12:04 PM Feb 19, 2022 | Team Udayavani |

ವಿಜಯಪುರ: ಕಲ್ಲಿದ್ದಲು ಸಾಗಿಸುತ್ತಿದ್ದ ವೇಳೆ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು, ಲಾರಿ ಸಂಪೂರ್ಣ ಸುಟ್ಟು ಘಟನೆ ನಿಡಗುಂದಿ ತಾಲೂಕಿನ ಅಬ್ಬಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.

Advertisement

ಬಳ್ಳಾರಿಯಿಂದ ಮಹಾರಾಷ್ಟ್ರದ ಔರಂಗಾಬಾದ್ ಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಎಂ.ಎಚ್. 18- ಎಎ 8738 ಸಂಖ್ಯೆಯ ಲಾರಿ ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾಗಿದೆ.

ಇದನ್ನೂ ಓದಿ:ಹಿಜಾಬ್ ವಿವಾದ: ಶಿವಮೊಗ್ಗದಲ್ಲಿ 58 ವಿದ್ಯಾರ್ಥಿಗಳು ಸಸ್ಪೆಂಡ್ ಆಗಿಲ್ಲ; ಡಿಸಿ ಗರಂ

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿತ್ತು. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next