Advertisement

Vijayapura; ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

08:06 PM Jul 29, 2024 | Vishnudas Patil |

ವಿಜಯಪುರ : ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ತೀವ್ರಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ.

Advertisement

ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ.ಎ. ಗ್ರಾಮದ ವಿದ್ಯಾರ್ಥಿ 16 ವರ್ಷದ ಸಂದೀಪ ಗಿಡ್ಡನಗೋಳ ಮೃತ ದುರ್ದೈವಿ. ಸಂದೀಪ ಸಿಂದಗಿ ಪಟ್ಟಣದ ಎಸ್.ಜಿ. ಹೈಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಸೋಮವಾರ ಬೆಳಗ್ಗೆ ಶಾಲೆಗೆ ತೆರಳಲು ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬನ್ನಿಹಟ್ಟಿ ಗ್ರಾಮದ ಸಂದೀಪ ಬಸ್‌ನಿಂದ ಕೆಳಗೆ ಬಿದ್ದು ತೀವ್ರಗಾಯಗೊಂಡಿದ್ದ. ಬಸ್‌ನ ಹಿಂಬದಿ ಗಾಲಿಗೆ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಸಿಂದಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಘಟನೆಯ ಹಿನ್ನೆಲೆಯಲ್ಲಿ ಉದ್ರಿಕ್ತಗೊಂಡ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರಲ್ಲದೇ, ಸಾರಿಗೆ ಸಂಸ್ಥೆಯ ಸಿಂಧಗಿ ಘಟಕದ ವ್ಯವಸ್ಥಾಪಕ ಸ್ಥಳಕ್ಕೆ ಬರಬೇಕು. ಅಪಘಾತಕ್ಕೆ ಕಾರಣವಾದ ಬಸ್ ಚಾಲಕ-ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next