Advertisement

ಉತ್ತಮ ಗೆಲುವು ಆಕೈತಿ, ಅರ್ಹ ವ್ಯಕ್ತಿಯ ಮರ್ದನ ಆಕೈತಿ.. ಬಬಲಾದಿ ಮುತ್ಯಾನ ಕಾಲಜ್ಞಾನದ ಭವಿಷ್ಯ

07:33 PM Mar 12, 2024 | Team Udayavani |

ವಿಜಯಪುರ : 2024 ರಲ್ಲಿ ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ, ಉತ್ತಮ ವ್ಯಕ್ತಿಯ ಗೆಲುವೂ ಆಕೈತಿ. ಗಡಿ ಕಾಯುವ ಯೋಧರಿಗೆ ನೋವು ಉಂಟಾಕೈತಿ, ಧರ್ಮ ಧರ್ಮಗಳ ಮಧ್ಯೆ ಕಿತ್ತಾಟ ಐತಿ…

Advertisement

ಇದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿ ಹೊಳೆ ಬಬಲಾದಿಯ ಚಂದ್ರಗಿರಿಸದಾಶಿವ ಮುತ್ಯಾನ ಜಾತ್ರೆಯಲ್ಲಿ ಶ್ರೀಮಠದ ಮಠಾಧೀಶರಾದ ಸಿದ್ಧರಾಮಯ್ಯ ಹೊಳಿಮಠ ಕಾಲಜ್ಞಾನದ ಭವಿಷ್ಯ ನುಡಿದಿದ್ದು, ಅಲ್ಲಲ್ಲಿ ರಾಜಕೀಯ ಗೊಂದಲ ಉಂಟಾಗಲಿದೆ. ಅವರವರಲ್ಲೇ ಕಾಲು ಎಳೆಯುವ ಜನರು ಹೆಚ್ಚಾಗುತ್ತಾರೆ ಎಂದು ಹೇಳಿದ್ದಾರೆ.

ರಾಜಕೀಯ ಸಂಘರ್ಷ ಹೆಚ್ಚಲಿದೆ ಎಂದಿರುವ ಕಾಲಜ್ಞಾನದ ಭವಿಷ್ಯ, ಸಾಧಾರಣ ಮಳಿ ಐತಿ, ಬೆಳಿಗೆ ಕೀಟಬಾಧೆ ಹೆಚ್ಚೈತಿ. ಮಕ್ಕಳಿಗೆ ರೋಗಬಾಧೆ ಹೆಚ್ಚು, ಕಣ್ಣಿನ ಕಾಯಿಲೆ ಕಾಡುತ್ತದೆ. ಬರವೂ ಇದೆ, ಕೇಡೂ ಇದೆ. ಭಯೋತ್ಪಾದನೆ, ನೈಸಗಿರ್ಕ ವಿಕೋಪವೂ ಇರಲಿದೆ. ಜೇಷ್ಠ ಮಾಸದಲ್ಲಿ ಲಿಂಗ ಸಮಾನತೆ ಇರಲಿದೆ ಎಂದೂ ಹೇಳಿದ್ದಾರೆ.

ಸದಾಶಿವ ಮುತ್ಯಾನ ಮಠದಲ್ಲಿ ಈ ವರೆಗೆ ನುಡಿರುವ ಕಾಲಜ್ಞಾನದ ಭವಿಷ್ಯ ಸುಳ್ಳಾಗಿಲ್ಲ ಎಂಬುದು ಈ ಭಾಗದ ಜನರ ನಂಬಿಕೆ. ಹೀಗಾಗಿ ಸಿದ್ಧರಾಮಯ್ಯ ಶ್ರೀಗಳು ನುಡಿದಿರು ಈ ಬಾರಿಯ ಕಾಲಜ್ಞಾನವನ್ನೂ ಹಲವರು ಹಲವು ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.

ಕ್ರೋಧಿನಾಮ ಸಂವತ್ಸರದಲ್ಲಿ ಕೋಪ ಹೆಚ್ಚಾಗುತ್ತದೆ, ಸಿಟ್ಟಿನವರು ಹೆಚ್ಚಾಗುತ್ತಾರೆ. ವ್ಯಾಪಾರಸ್ಥರಿಗೆ ಮಧ್ಯಮ ಫಲವಿದೆ. ಮಳೆ ಬೆಳೆ ಫಲ ಸಸಿಗಳು ಖಂಡ ಮಂಡಳವಾಗುತ್ತದೆ. ಧವಸ ಧಾನ್ಯಗಳು ರಸಗಳು ಮಾರಾಟವಾಗುತ್ತವೆ ಎಂದಿದ್ದಾರೆ.

Advertisement

ಉತ್ತರ ಭಾಗಕ್ಕೆ ಬರಗಾಲ ಹಾಗೂ ಕೇಡಾಗುತ್ತದೆ. ದೊಡ್ಡ ದೊಡ್ಡ ಮಹಾನರ ಯೋಗ ಅಳಿಯಲಿವೆ. ಕುಲ ಜಾತಿಗಳಲ್ಲಿ ಕಹ ಜಾಸ್ತಿ ಇರಲಿದೆ. ಶಿಶುಗಳಿಗೆ ಆರೋಗ್ಯ ಬಾಧೆ ಹೆಚ್ಚಾಗುತ್ತದೆ. ಆಡಂಬರದ ಜೀವನ ನಡೆಸುವವರು ಸಾಲದ ಬಾಧೆ ಎದುರಿಸಬೇಕಾಗುತ್ತದೆ. ಸಕ್ಕರೆ, ಬೆಣ್ಣೆ, ಕುಸುಬೆ, ಸೇಂಗಾ ಬೆಲೆ ಹೆಚ್ಚುತ್ತವೆ.

ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ಗೆ ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮ… ತಾಲೂಕು ಆಡಳಿತ ಸೌಧ ಬಳಿ ಘಟನೆ

Advertisement

Udayavani is now on Telegram. Click here to join our channel and stay updated with the latest news.

Next