Advertisement

ಎಂ.ಬಿ.ಪಾಟೀಲ್‌ ಭೇಟಿಯಾದ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಟ್ಠಲ್‌!

09:50 AM Apr 21, 2018 | Team Udayavani |

ವಿಜಯಪುರ: ನಾಗಠಾಣಾ ಮೀಸಲು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಹಿನ್ನಲೆಯಲ್ಲಿ ಬಂಡಾಯ ವೆದ್ದಿರುವ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಟ್ಠಲ ಕಟಕದೊಂಡ ಅವರು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಬಹುತೇಕ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. 

Advertisement

ನಾಗಠಾಣಾ ಕ್ಷೇತ್ರಕ್ಕೆ ಬಿಜೆಪಿ  ಮಾಜಿ ಸಚಿವ ಗೋವಿಂದ ಕಾರಜೋಳ ಪುತ್ರ ಡಾ. ಗೋಪಾಲ್‌ ಕಾರಜೋಳ ಅವರಿಗೆ 3 ನೇ ಪಟ್ಟಿಯಲ್ಲಿ ಟಿಕೆಟ್‌ ನೀಡಿದೆ. 

ವಿಟ್ಠಲ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿ  ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. 

ಕಟಕದೊಂಡ ಅವರು ಯಡಿಯೂರಪ್ಪ ಆಪ್ತರಾಗಿದ್ದು, ಕೆಜೆಪಿಯಲ್ಲಿ ಗುರುತಿಸಿಕೊಂಡಿದ್ದರಾದರೂ ಟಿಕೆಟ್‌ ಕೈತಪ್ಪಿದೆ.

ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಭಾರೀ ಭಿನ್ನಮತ ಭುಗಿಲೆದ್ದಿದ್ದು ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯ ಎದುರಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next