Advertisement

Vijayapura: ಅರ್ಜುಣಗಿ ಬಳಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

09:30 AM Apr 13, 2024 | |

ವಿಜಯಪುರ : ಜಿಲ್ಲೆಯ ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ ಕಾರು-ಸಿಮೆಂಟ್ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜರುಗಿದೆ.

Advertisement

ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಜಯಪುರ ನಗರದ 32 ವರ್ಷದ ಅರ್ಜುನ ಕುಶಾಲಸಿಂಗ್ ರಜಪೂತ, 12 ವರ್ಷದ ಮೇಘರಾಜ ಅರ್ಜುನ ರಜಪೂತ, 52 ವರ್ಷದ ರವಿನಾಥ ಸನಿಲಾಲ್ ಪತ್ತಾರ, 40 ವರ್ಷದ ಪುಷ್ಪಾ ರವಿನಾಥ ಪತ್ತಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಜಯಪುರ ನಗರದಿಂದ ಕೆಎ28- ಡಿ1021 ಸಂಖ್ಯೆಯ ಕಾರಿನಲ್ಲಿ ಜಮಖಂಡಿ ದೇವಸ್ಥಾನಕ್ಕೆ  ಹೊರಟಿದ್ದಾಗ ಜಮಖಂಡಿಯಿಂದ ಸಿಮೆಂಟ್ ತುಂಬಿಕೊಂಡು ವಿಜಯಪುರ ನಗರದತ್ತ ಬರುತ್ತಿದ್ದ ಕೆಎ16- ಬಿ6472 ನೋಂದಣಿಯ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ.

ಅಪಘಾತದ ರಭಸಕ್ಕೆ ವಾಹನಗಳಲ್ಲಿ ಸಿಲುಕಿದ್ದ ಶವಗಳನ್ನು ಪೊಲೀಸರು ಪ್ರಯಾಸದಿಂದ ಹೊರತೆಗೆದಿದ್ದಾರೆ.

Advertisement

ಘಟನೆಯ ಸುದ್ದಿ ತಿಳಿಯುತ್ತಲೇ ಎಸ್ಪಿ ಋಷಿಕೇಶ ಭಗವಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಬಬಲೇಶ್ವರ ಠಾಣೆ ಪೊಲೀಸರು ಪ್ರಜರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next