Advertisement

Vijayapura; ನಗರದ ವೃತ್ತಕ್ಕೆ ಸಿದ್ಧೇಶ್ವರಶ್ರೀ ಹೆಸರು ನಾಮಕರಣ

06:30 PM Jan 22, 2024 | keerthan |

ವಿಜಯಪುರ: ತಮ್ಮ ಹೆಸರಿನಲ್ಲಿ ಯಾವುದೇ ಸ್ಮಾರಕಗಳು ಬೇಡ ಎಂದು ಹೇಳಿದ್ದರೂ ನಿರ್ಮೋಹಿ ಸಂತ ಸಿದ್ಧೇಶ್ವರ ಶ್ರೀಗಳ ಹೆಸರಿನಲ್ಲಿ ನಗರದಲ್ಲಿ ವೃತ್ತವನ್ನು ನಿರ್ಮಿಸಲಾಗಿದೆ.

Advertisement

ಸೋಮವಾರ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲೇ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ರಾಜು ಮಗಿಮಠ ಸಮ್ಮುಖದಲ್ಲಿ ನಗರದ ಗುಮಾಸ್ತ ಕಾಲೋನಿಯಲ್ಲಿನ ವೃತ್ತಕ್ಕೆ ಸಿದ್ಧೇಶ್ವರ ಶ್ರೀಗಳ ಭಾವಚಿತ್ರ ಸಹಿತ, ವೃತ್ತಕ್ಕೆ ನಾಮಕರಣ ಮಾಡಲಾಗಿದೆ.

ಶ್ರೀಗಳು ಹೇಳಿದ್ದರೂ ಅವರ ಸ್ಮರಣೆ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ಶ್ರೀಗಳ ನೆನಪಿಗಾಗಿ ನಗರದಲ್ಲಿ ಸಿದ್ಧೇಶ್ವರ ಶ್ರೀಗಳ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಮುಂದಾಗಿದ್ದೇವೆ. ವೃತ್ತ ನಿರ್ಮಾಣದ ಕುರಿತು ಮಹಾನಗರ ಪಾಲಿಕೆಯಿಂದ ಪರವಾನಿಗೆ ಪಡೆದಿರುವುದಾಗಿ ಸ್ಥಳೀಯರು ಹೇಳುತ್ತಾರೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ದಿನವೇ ಶ್ರೀಗಳ ಹೆಸರಿನಲ್ಲಿ ವೃತ್ತ ನಿರ್ಮಿಸುವ ಮೂಲಕ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯನ್ನು ಸ್ಮರಣೀಯಗೊಳಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next