Advertisement

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

06:46 PM Apr 23, 2024 | keerthan |

ವಿಜಯಪುರ: ದಾಖಲೆಯಿಲ್ಲದೆ ನನ್ನ ವಿರುದ್ಧ ಸಕ್ಕರೆ ಕಾರ್ಖಾನೆಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದು ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಹೇಳಿದರು.

Advertisement

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗಳಿಂದ ಹಣ ವಸೂಲು ಮಾಡುತ್ತಿರುವುದಾಗಿ ನನ್ನ ವಿರುದ್ದ ಬಿಜೆಪಿ ಶಾಸಕ ಯತ್ನಾಳ ಆಧಾರ ರಹಿತವಾಗಿ ಆರೋಪ ಮಾಡಿದ್ದರು. ರಾಜ್ಯದಲ್ಲಿರುವ 74 ಕಾರ್ಖಾನೆಗಳಿಂದ ಹಣ ಪಡೆದಿಲ್ಲ ಎಂದರು.

ಕಾಂಗ್ರೆಸ್ ನಾಯಕರು ಆಡುವ ಮಾತಿನ ವಿರುದ್ಧ ಕ್ರಮಕ್ಕೆ ಮುಂದಾಗುವ ಚುನಾವಣಾ ಆಯೋಗದ ದಾಖಲೆ ಇಲ್ಲದೆ ಬಾಯಿಗೆ ಬಂದಂತೆ ಏನೆಲ್ಲಾ ಮಾತನಾಡುವ ಯತ್ನಾಳ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next