Advertisement

Crime: ವಿಜಯಪುರ ನಗರದಲ್ಲಿ ಯುವಕನ ಹತ್ಯೆ

01:17 PM Dec 10, 2023 | Kavyashree |

ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಗರದ ಝಂಡಾ ಕಟ್ಟೆ ಪ್ರದೇಶದಲ್ಲಿ ನಡೆದಿದೆ.

Advertisement

ಮೃತ ಯುವಕನನ್ನು 21 ವರ್ಷದ ಸಾಹಿಲ್ ಭಾಂಗಿ ಎಂದು ಗುರುತಿಲಾಗಿದೆ.

ನಗರದಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಯುವಕನ ಹತ್ಯೆಯ ಕುರಿತು ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಭೇಟಿ ನೀಡಿರುವ ಎಸ್ಪಿ ಋಷಿಕೇಶ ಭಗವಾನ್, ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಗಿನ‌ ಜಾವದ ಮಧ್ಯಾವಧಿಯಲ್ಲಿ ಈ ಕೃತ್ಯ ನಡೆದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಯುವಕನ ಹತ್ಯೆಗೆ ನಿಖರ ಕಾರಣ ಪತ್ತೆ ಮಾಡುತ್ತೇವೆ. ಕುಟುಂಬ ಸದಸ್ಯರು ನೀಡುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಿದ್ದೇವೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next