Advertisement

ಕೌಟುಂಬಿಕ ಕಲಹ : ಮೂರು ಮಕ್ಕಳನ್ನು ಕೃಷಿ ಹೊಂಡಕ್ಕೆ ಎಸೆದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

07:14 PM Jun 15, 2022 | Team Udayavani |

ವಿಜಯಪುರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮೂರು ಮಕ್ಕಳನ್ನು ಕೃಷಿ ಹೊಂಡಕ್ಕೆ ಎಸೆದು, ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ತೊರವಿ ತಾಂಡಾ-1 ರ ತೋಟದಲ್ಲಿ ಈ ಘಟನೆ ನಡೆದಿದೆ. ಅನಿತಾ ಪಿಂಟು ಜಾಧವ್ (27) ಎಂಬ ಮಹಿಳೆಯೇ ತನ್ನ ಮೂರು ಮಕ್ಕಳನ್ನು ಕೆರೆಗೆ ಎಸೆದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಜನ್ಮನೀಡಿದ ತಾಯಿಯಿಂದಲೇ ಕೃಷಿ ಹೊಂಡಕ್ಕೆ ಎಸೆಯಲ್ಪಟ್ಟು ಜೀವ ಕಳೆದುಕೊಂಡ ಹಸುಳೆಗಳನ್ನು ಪ್ರವೀಣ(6) ಸುದೀಪ (4) ಮಮದಿಕಾ (2) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ವಿಜಯಪುರ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೃಷಿ ಹೊಂಡದಿಂದ ಮೃತ ದೇಹಗಳನ್ನು ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ಮುಂದಿನ ದಿನಗಳಲ್ಲಿ ನಮ್ಮಂತವರು ಚುನಾವಣೆ ಎದುರಿಸುವುದು ತುಂಬಾ ಕಷ್ಟ : ಮೋಟಮ್ಮ

Advertisement
Advertisement

Udayavani is now on Telegram. Click here to join our channel and stay updated with the latest news.

Next