Advertisement

Vijayapura ಕ್ರೂಸರ್-ಟ್ರ್ಯಾಕ್ಟರ್ ಢಿಕ್ಕಿ : ಇಬ್ಬರು ಮೃತ್ಯು

11:32 PM May 18, 2023 | Team Udayavani |

ವಿಜಯಪುರ : ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮದ್ಯೆ ಮುಖಾಮುಖಿ ಢಿಕ್ಕಿಯಾಗಿ ದೇವರ ದರ್ಶನಕ್ಕೆ ತೆರಳಿದ್ದ ಇಬ್ಬರು ಮೃತಪಟ್ಟ ಘಟನೆ ಇಂಡಿ ತಾಲ್ಲೂಕಿನ ಬಬಲಾದಿ ಗ್ರಾಮದ ಬಳಿ ಜರುಗಿದೆ.

Advertisement

ಕ್ರೂಸರ್ ನಲ್ಲಿದ್ದ ಒಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತರೆ ಗಾಯಗಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ಘಟನೆ ಜರುಗಿದೆ. ಅಪಘಾತದ ಬಳಿಕ ಟ್ರ್ಯಾಕ್ಟರ್ ಢಿಕ್ಕಿ ಬಳಿಕ ಮರಕ್ಕೆ ಢಿಕ್ಕಿಯಾಗಿದೆ. ಪಲ್ಟಿಯಾದ ಕ್ರೂಸರನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ಇಂಡಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರು ಹಾಗೂ ಗಾಯಾಳು ಚಡಚಣ ತಾಲೂಕಿನ ಲಮಾಣಹಟ್ಟಿ ಗ್ರಾಮದ ನಿವಾಸಿಗಳು. ಕಲಬುರಗಿ ಜಿಲ್ಲೆ ಅಫಜಲಪೂರ ತಾಲೂಕಿನ ಮಣೂರು ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ದುರಂತ ದುರ್ಘಟನೆ ಸಂಭವಿಸಿದೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next