Advertisement

ದಾನಿಗಳಿಂದ ಸ್ವೀಕರಿಸಿದ ಆಕ್ಸಿಜನ್ ಕಾನ್ಸಂಟ್ರೇಟರ್ ಸರ್ಕಾರಿ ಆಸ್ಪತ್ರೆಗಳಿಗೆ ಹಂಚಿಕೆ

08:10 PM May 19, 2021 | Team Udayavani |

ವಿಜಯಪುರ : ಜಿಲ್ಲೆಯಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಆಮ್ಲಜನಕ ಪೂರೈಕೆಗಾಗಿ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಸ್ವಯಂ ಪ್ರೇರಿತ ದಿಂದ ಕೊಡಮಾಡಿದ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬುಧವಾರದ ವರೆಗೆ ಜಿಲ್ಲೆಯ ವಿವಿಧ ದಾನಿಗಳಿಂದ ಸಂಘ /ಸಂಸ್ಥೆಗಳಿಂದ ಸ್ವೀಕೃತವಾದ ಹಾಗೂ ಕಚೇರಿಯಿಂದ ಖರೀದಿಸಲಾದ ಆಕ್ಸಿಜನ್ ಕಾನ್ಸಂಟ್ರೇಟರ್/ ವೆಂಟಿಲೇಟರ್ಸ ಗಳ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.

ರೆಡ್ ಕ್ರಾಸ್ ಏಜೆನ್ಸಿಯಿಂದ 2 ಆಕ್ಸಿಜನ್ ಕಾನ್ಸಂಟ್ರೇಟರ್, 1 ವೆಂಟಿಲೇಟರ್ ಸ್ವೀಕರಿಸಿದ್ದು, ಸರ್ಕಾರಿ ಜಿಲ್ಲಾಸ್ಪತ್ರೆಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :ಹಳ್ಳಿಯಲ್ಲಿ ವ್ಯವಸ್ಥೆಯ ಕೊರೆತೆ ಇದ್ದರೆ ಕೋವಿಡ್ ಕೇರ್ ಸೆಂಟರ್ ಗೆ  ಬನ್ನಿ : ಡಾ.ಕೆ.ಸುಧಾಕರ್

ಫ್ಯಾಮಿಲಿ ಟ್ರಸ್ಟ್ ಉಡುಪಿ ಜೆ. ಎಸ್. ಶಂಕರ್ ವತಿಯಿಂದ ನೀಡಿದ 10 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂಡಿ ತಾಲೂಕು ಆಸ್ಪತ್ರೆಗೆ 6 ಹಾಗೂ ಸಿಂದಗಿ ತಾಲೂಕ ಅಸ್ಪತ್ರೆಗೆ 4 ನೀಡಲಾಗಿದೆ. ಸತೀಶ್ ಅಂಬಾಟಿ ಫೌಂಡರ್ ಮತ್ತು ಸಿ.ಇ. ಒ H2o ಮೌಂಟೇನ್ ವ್ಯೂ ಕ್ಯಾಲಿಫೋರ್ನಿಯ ನೀಡಿದ 5 ಆಕ್ಸಿಜನ್ ಕಾನ್ಸಂಟ್ರೇಟರ್ ಸರ್ಕಾರಿ ಜಿಲ್ಲಾ ಆಸ್ಪತ್ರೆ, ಬಸವನ ಬಾಗೇವಾಡಿ, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ನೀಡಲಾಗಿದೆ ಎಂದರು.

Advertisement

ಇದಲ್ಲದೇ ಡೋರ್ರೆನ್ 304. ಪ್ರೆಸ್ಟೀಜ್ ಪೆಂಟಾ ಈವಾ ಮಾಲ್ ದಿಂದ ಜಿಲ್ಲಾಡಳಿತ ಖರೀದಿಸಿದ 10 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಸರಕಾರಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next