Advertisement

ಶೀಲ‌ ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿದ ಪತಿ: ತಾನೂ ಆತ್ಮಹತ್ಯೆ

08:10 AM Apr 30, 2020 | keerthan |

ವಿಜಯಪುರ: ತನ್ನ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತ್ನಿಯನ್ನು ಹತ್ಯೆ ಮಾಡಿ, ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಜರುಗಿದೆ.

Advertisement

ನಾಗರಹಳ್ಳಿ ಗ್ರಾಮದವರಾದ 30 ವರ್ಷ ಹಣಮಂತ ವಗ್ಗಪ್ಪ ಪೂಜಾರಿ ಹಾಗೂ 25 ವರ್ಷದ ಯಲ್ಲವ್ವ ಹಣಮಂತ ಪೂಜಾರಿ, ಕೂಲಿ ಕೆಲಸಕ್ಕಾಗಿ ಆಲಮೇಲ ಪಟ್ಟಣಕ್ಕೆ ಬಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಆಲಮೇಲ ಪಟ್ಟಣದ ಕಡಣಿ ರಸ್ತೆಗೆ ಹೊಂದಿಕೊಂಡ ಪ್ರದೇಶದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಬಂದು ನೆಲೆಸಿದ್ದ ದಂಪತಿ ಮಧ್ಯೆ ಪತ್ನಿಯ ಅನೈತಿಕ ಸಂಬದದ ಕುರಿತು ಆಗಾಗ‌ ಜಗಳ ನಡೆಯುತ್ತಿತ್ತು.

ಮಂಗಳವಾರ ರಾತ್ರಿಯೂ ಅನೈತಿಕ ಸಂಬಂಧ ಕುರಿತು ದಂಪತಿ‌ ಮಧ್ಯೆ ಆರಂಭಗೊಂಡ ಜಗಳ ತಾರಕಕ್ಕೇರಿ‌ ದುರಂತದಲ್ಲಿ ಅಂತ್ಯ ಕಂಡಿದೆ.

ಮಾರಕಾಸ್ತ್ರದಿಂದ ಪತ್ನಿಯನ್ನು ಹತ್ಯೆ‌ಮಾಡಿದ ಬಳಿಕ ಪತಿ ನೇಣಿಗೆ ಶರಣಾಗಿದ್ದ. ಬುಧವಾರ  ನಸುಕಿನಲ್ಲಿ ದಂಪತಿಯ 3 ವರ್ಷದ ಮಗು ಹೆತ್ತವರ ದುರಂತ ಕಂಡು ಕಿರುಚಾಟ ಆರಂಭಿಸಿದೆ. ಮಗುವಿನ ಆಕ್ರಂದನ ಕೇಳಿದ ಅಕ್ಕಪಕ್ಕದ ಮನೆಯವರು ಮನೆಯ ಬಾಗಿಲು ಮುರುದು ನೋಡಿದಾಗ ದಂಪತಿಯ ದುರಂತ ಅಂತ್ಯದ ಸಂಗತಿ ಬೆಳಕಿಗೆ ಬಂದಿದೆ.

Advertisement

ಸುದ್ದಿ ತಿಳಿದು ಸ್ಥಳಕ್ಜೆ ಧಾವಿಸಿರುವ ಆಲಮೇಲ ಪೊಲೀಸರು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next