Advertisement

Vijayapura: ಆಯುಷ್ ಆರೋಗ್ಯ ಮಂದಿರದಲ್ಲಿ ಕುಡುಕ ವೈದ್ಯನ ಅವಾಂತರ

09:13 PM Sep 10, 2024 | keerthan |

ವಿಜಯಪುರ: ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದು ಅವಾಂತರ ಸೃಷ್ಟಿಸಿದ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ ಆಯುಷ್ ಆರೋಗ್ಯ ಮಂದಿರದಲ್ಲಿ ನಡೆದಿದೆ. ಅಲ್ಲದೇ, ಮಹಿಳಾ ರೋಗಿಗಳಿಗೆ ಅವಾಚ್ಯವಾಗಿ ನಿಂದಿಸಿದ ಆರೋಪವೂ ಕೇಳಿ ಬಂದಿದೆ.

Advertisement

ಗ್ರಾಮದ ಆಯುಷ್ ಆರೋಗ್ಯ ಮಂದಿರದ ನಾರಾಯಣ ರಾಠೋಡ ಎಂಬ ವೈದ್ಯನೇ ಈ ರಂಪಾಟ ಮಾಡಿದ್ದಾನೆ. ಆರೋಗ್ಯ ನಿರೀಕ್ಷಣಾಧಿಕಾರಿಯಾದ ಈತ ಆಸ್ಪತ್ರೆಯ ಕಿಟಕಿ, ಗಾಜು ಮತ್ತು ಪೀಠೋಪಕರಣಗಳನ್ನೂ ಪುಡಿ ಮಾಡಿದ್ದಾನೆ. ಅಲ್ಲದೆ, ಮತ್ತಿನಲ್ಲಿ ಆಸ್ಪತ್ರೆಯಲ್ಲಿ ಬಿದ್ದು ಒದ್ದಾಡಿದ್ದಾನೆ. ಈ ಹಿಂದೆಯೂ ಇದೇ ರೀತಿಯಾಗಿ ಮದ್ಯ ಸೇವಿಸಿದ ಆರೋಪದ ಮೇಲೆ ನಾರಾಯಣ ರಾಠೋಡ ಅಮಾನತುಗೊಂಡಿದ್ದ ಎಂದು ತಿಳಿದುಬಂದಿದೆ.

ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ ಪ್ರತಿಕ್ರಿಯಿಸಿ, ಆಸ್ಪತ್ರೆಗೆ ನಾರಾಯಣ ರಾಠೋಡ ಮದ್ಯ ಸೇವಿಸಿ ಬಂದಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಮಾಡಿ ವರದಿ ನೀಡುವಂತೆ ತಾಲೂಕಾ ಆರೋಗ್ಯಾಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಶಿಸ್ತುಕ್ರಮ ಜರುಗಿಸಲಾಗುವುದು. ಅಲ್ಲದೇ, ಪೀಠೋಪಕರಣಗಳಿಗೆ ಹಾನಿ ಮಾಡಿದ್ದರೆ, ಅದರ ಹಣವನ್ನು ನಾರಾಯಣ ರಾಠೋಡ ಅವರಿಂದಲೇ ಭರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next