Advertisement

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌… ಅಪಾರ ಪ್ರಮಾಣದ ಕಬ್ಬು ಸುಟ್ಟು ಭಸ್ಮ, ಕಂಗಾಲಾದ ರೈತ

05:10 PM Feb 22, 2024 | Team Udayavani |

ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿ ಸುಮಾರು ಹದಿಮೂರು ಎಕರೆ ಪ್ರದೇಶದಲ್ಲಿ ಬೆಳೆದ ಕಬ್ಬುಗಳು ಬಾಗಶ ಸುಟ್ಟು ಕರಕಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡನಲ್ಲಿ ನಡೆದಿದೆ.

Advertisement

ಶಿವಾನಂದ ಗುರಪ್ಪ ವಾಲಿ ಎಂಬುವವರಿಗೆ ಸೇರಿದ್ದ ಕಬ್ಬಿನ ಗದ್ದೆ ಇದಾಗಿದ್ದು ಹೆಚ್ಚಿನ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ.

ಗದ್ದೆಯಲ್ಲಿ ಹಾದು ಹೋದ ವಿದ್ಯುತ್ ತಂತಿಯಿಂದ ಬೆಂಕಿ ಕಾಣಿಸಿಕೊಂಡು ಅಗ್ನಿ ಅವಘಡ ಸಂಭವಿಸಿದೆ, ಪರಿಣಾಮ 6 ಟ್ರಿಪ್ ಗೊಬ್ಬರ, 2 ಟ್ರ್ಯಾಕ್ಟರ್ ಮೇವು, 15 ಚೀಲ ಜೋಳ ಹಾಗೂ 15 ಚೀಲ ಸೆಜ್ಜೆಯ ತೆನೆಗಳು ಹಾನಿಯಾಗಿವೆ.

ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಬೆಳೆ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ.

ಇದನ್ನೂ ಓದಿ: BJP ಯಿಂದ ಅಮಾನತಾದವರಿಂದಲೂ ‘ಮತ್ತೊಮ್ಮೆ ಮೋದಿ’ ಗೋಡೆ ಬರಹಕ್ಕೆ ಚಾಲನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next