Advertisement

Vijayapura; ಪರಿಷತ್ ಮಾಜಿ ಸದಸ್ಯ ಎಸ್.ಎ.ಜಿದ್ದಿ ನಿಧನ

01:02 PM Feb 11, 2024 | Team Udayavani |

ವಿಜಯಪುರ: ಜಿಲ್ಲೆಯ ಶಿಕ್ಷಣ ಪ್ರೇಮಿ, ಹಿರಿಯ ರಾಜಕೀಯ ನಾಯಕರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಯ ಅಡಿವೆಪ್ಪ ಜಿದ್ದಿ (83) ನಿಧನರಾಗಿದ್ದಾರೆ.

Advertisement

ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಶಿವರಾಯ ಜಿದ್ದಿ ಅವರು, ಭಾನುವಾರ ಮಧ್ಯಾಹ್ನ ಬೆಳಿಗ್ಗೆ 11-30 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಮೃತರು, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳು, ಅಭಿಮಾನಿಗಳನ್ನು ಅಗಲಿದ್ದಾರೆ.

ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಬಿಜಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

1994 ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ ಎಸ್.ಎ.ಜಿದ್ದಿ ಅವರು, ವಿಜಯಪುರ ನಗರದಲ್ಲಿ ಕಾಳಿದಾಸ ಶಿಕ್ಷಣ ಸಂಸ್ಥೆ ಕಟ್ಟಿ, ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ವಿಶೇಷ ಕಾಳಜಿ ನೀಡಿದ್ದರು.

Advertisement

ದೇವರಾಜ ಅರಸು, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅನುಯಾಯಿ ಆಗಿದ್ದ ಎಸ್.ಎ.ಜಿದ್ದಿ ಅವರು ಜಿಲ್ಲೆಯ ಕಾಂಗ್ರೆಸ್ ನಾಯಕರಾಗಿದ್ದ ಬಿ.ಎಂ.ಪಾಟೀಲ, ಬಿ.ಎಸ್‌.ಪಾಟೀಲ ಸಾಸನೂರ ಸೇರಿದಂತೆ ಹಿರಿಯ ರಾಜಕೀಯ ನಾಯಕರ ಸಮಕಾಲೀನ ರಾಜಕೀಯದಲ್ಲಿ ಸಕ್ರೀಯರಾಗಿದ್ದರು.

ಎಸ್.ಎ.ಜಿದ್ದಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಂಬನಿ‌ ಮಿಡಿದಿದ್ದು, ತಮ್ಮ ತಂದೆಯವರ ಸಮಕಾಲೀನ ರಾಜಕೀಯ ನಾಯಕನನ್ನು ಕಳೆದುಕೊಂಡುದಾಗಿ ಸ್ಮರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next