Advertisement

ಇಲಕಲ್ ಬಳಿ ಖಾಸಗಿ ಬಸ್ ಅಪಘಾತ: ಅಪಾಯದಿಂದ ಪಾರಾದ ವಿಜಯಪುರ ಗಾಣಿಗ ವನಶ್ರೀ ಮಠದಶ್ರೀ

02:58 PM Jul 19, 2022 | keerthan |

ವಿಜಯಪುರ: ಖಾಸಗಿ ಬಸ್ ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವಿಜಯಪುರ ಗಾಣಿಗ ಗುರುಪೀಠದ ವನಶ್ರೀ ಮಠದ ಡಾ.ಜಯಬಸವ ಶ್ರೀಗಳು ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

Advertisement

ಖಾಸಗಿ ಬಸ್ ನಲ್ಲಿ ಪ್ರಯಾಣಿಸುವಾಗ ಬಾಗಲಕೋಟೆ ಜಿಲ್ಲೆಯ ಇಲಕಲ್ಲ ಬಳಿ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಇದೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಜಯಪುರ ವನಶ್ರೀ ಮಠದ ಶ್ರೀಗಳಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಶ್ರೀಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ವನಶ್ರೀ‌ ಸಂಸ್ಥಾನಮಠ ಗಾಣಿಗ ಗುರುಪೀಠದ ಡಾ.ಜಯಬಸವ ಕುಮಾರ ಜಗದ್ಗುರುಗಳು ವಿಜಯಪುರದಿಂದ ಖಾಸಗಿ ಬಸ್ ನಲ್ಲಿ ಸೋಮವಾರ ರಾತ್ರಿ ಹರಿಹರ ಪೀಠಕ್ಕೆ ಪ್ರಯಾಣ ಬೆಳೆಸಿದ್ದರು. ಇಲಕಲ್ ಬಳಿ ಬಸ್ ಅಪಘಾತಕ್ಕೀಡಾಗಿ, ಶ್ರೀಗಳಿಗೆ ಕುತ್ತಿಗೆ, ಬೆನ್ನು ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ.

ಇದನ್ನೂ ಓದಿ:ಸಾಲಗಾರರ ಕಾಟ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಬಟ್ಟೆ ವ್ಯಾಪಾರಿ

ವಿಷಯ ತಿಳಿಯುತ್ತಲೇ ವನಶ್ರೀ ಸಂಸ್ತಾನ ಹಾಗೂ ಗಾಣಿಗ ಸಮಾಜದ ಭಕ್ತರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳು ವನಶ್ರೀ ಸದ್ಭಕ್ತರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಭಕ್ತರಿಗೆ ವಿಡಿಯೋ ಸಂದೇಶದ ಮೂಲಕ ಆತಂಕ ದೂರ ಮಾಡಿದ್ದಾರೆ.

Advertisement

ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಗುಣಮುಖರಾಗಿ ಶ್ರೀಮಠಕ್ಕೆ ಮರಳಲಿದ್ದೇವೆ. ಹೀಗಾಗಿ ಭಕ್ತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next