Advertisement

ವಿಜಯಪುರ: ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಓರ್ವ ಸಾವು

08:54 PM Oct 04, 2020 | Mithun PG |

ವಿಜಯಪುರ: ಜಿಲ್ಲೆಯ ಹಲವೆಡೆ ಭಾನುವಾರ ಭಾರಿ ಗುಡುಗು ಸಹಿತ ಮಳೆಯಾಗಿದ್ದು, ಓರ್ವ ವ್ಯಕ್ತಿ ಸಿಡಿಲಿಗೆ ಬಲಿಯಾಗಿದ್ದಾನೆ.

Advertisement

ಸಿಡಿಲಿಗೆ ಬಲಿಯಾದ ವ್ಯಕ್ತಿಯನ್ನು ಮುದ್ದೇಬಿಹಾಳ ತಾಲೂಕಿನ ಇಣಚಗಲ್ ಗ್ರಾಮದ ಹುಲ್ಲಪ್ಪ ಮಾದರ (38) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೆಲಸ ಮಾಡುವಾಗ ಮರದ ಕೆಳಗೆ ನಿಂತಿದ್ದವನಿಗೆ ಮಧ್ಯಾಹ್ನ 3-30 ರ ಸುಮಾರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಳೆಯಾಗುತ್ತಿದ್ದ ವೇಳೆ ಜಮೀನಿನ ಮರದ ಕೆಳಗೆ ನಿಂತಿದ್ದ ಹುಲ್ಲಪ್ಪ ಸಿಡಿಲು ಬಡಿದು ಮೃತಪಟ್ಟ ಬಳಿಕ ಎತ್ತುಗಳಷ್ಟೇ ಮನೆಗೆ ಹೋಗಿದ್ದವು. ಆ ಬಳಿಕವೇ ಕುಟುಂಬ ಸದಸ್ಯರು ಆತಂಕಗೊಂಡು ಹೊಲಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next