Advertisement

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

09:13 AM Apr 09, 2020 | keerthan |

ವಿಜಯಪುರ: ಅಪ್ರಾಪ್ತ ಮೂವರು ಬಾಲಕರು ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪೊಲೀಸರ ವಶವಾಗಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಜರುಗಿದೆ.

Advertisement

ಇಂಡಿ ಪಟ್ಟಣದಲ್ಲಿ ಇರುವ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿ ಅವರಿಗೆ ಸೇರಿದ ಶ್ರೀ ಸಾಯಿ ಸಂತೋಷ ಆಸ್ಪತ್ರೆಗೆ ಬಂದಿದ್ದ‌ ಮೂವರು ಅಪ್ರಾಪ್ತರು

ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿ, ಆಸ್ಪತ್ರೆಯ ಒಳ ಆವರಣದಲ್ಲಿ ಎಲ್ಲೆಂದರಲ್ಲಿ ಉಗಿದ್ದಾರೆ.

ಸದರಿ ಅಪ್ರಾಪ್ತರ ಈ ವರ್ತನೆ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಇದನ್ನು ಗಮನಿಸಿದ ಆಸ್ಪತ್ರೆ ವೈದ್ಯರು ಪೊಲೀಸರಿಗೆ ದೂರು ನೀಡಿದ್ದು, ಈ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಈ ಕುರಿತು ಇಂಡಿ ನಗರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next