Advertisement

ವಿಜಯಪುರದ ಆಲಮೇಲದಲ್ಲಿ ಹಾಡಹಗಲೇ ರೌಡಿಶೀಟರ್ ಹತ್ಯೆ

05:16 PM Jul 11, 2023 | Team Udayavani |

ಆಲಮೇಲ (ವಿಜಯಪುರ): ರೌಡಿಶೀಟರ್ ಒಬ್ಬನನ್ನು ಜಿಲ್ಲೆಯ ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಜರುಗಿದೆ.

Advertisement

ಆಲಮೇಲ ಪಟ್ಟಣ ನಿವಾಸಿ ಮಾಳಪ್ಪ ಯಮನಪ್ಪ ಮೇತ್ರಿ ಹತ್ಯೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ. ದೇವರನಾವದಗಿ ಪರಿಸರದಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಾರಕಾಸ್ತ್ರಗಳಿಂದ ತಲೆಗೆ ಭಾರಿ ಪ್ರಮಾಣದಲ್ಲಿ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವವಾಗಿ ಮಾಳಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ರೌಡಿಶೀಟರ್ ಮಾಳಪ್ಪ ಈ ಪರಿಸರದಲ್ಲಿ ಅನಧಿಕೃತ ಹಾಗೂ ಕಾನೂನು ಬಾಹೀರವಾಗಿ ಇಸ್ಪೀಟ್ ಜೂಜು ಅಡ್ಡೆ ನಡೆಸುತ್ತಿದ್ದ ಎನ್ನಲಾಗಿದೆ. ಹತ್ಯೆಯಾಗಿರುವ ರೌಡಿಶೀಟರ್ ಮಾಳಪ್ಪನ ಮೇಲೆ ಆಲಮೇಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿದ್ದು, ಪದೇ ಪದೇ ಕಾನೂನು ಬಾಹೀರ ಕೃತ್ಯದಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ ಪೊಲೀಸರು ರೌಡಿಶೀಟ್ ತೆರೆದಿದ್ದರು.

ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಧಾವಿಸಿರುವ ಆಲಮೇಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next