Advertisement

Vijayapura; ಫೇಸ್‌ಬುಕ್‌ ನಲ್ಲಿ ಧರ್ಮ-ಪಕ್ಷದ ವಿರುದ್ಧ ಪೋಸ್ಟ್: ಅತಿಥಿ ಶಿಕ್ಷಕನಿಗೆ ನೋಟಿಸ್

04:28 PM Mar 22, 2024 | keerthan |

ವಿಜಯಪುರ: ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವಾಗ ಅತಿಥಿ ಶಿಕ್ಷಕರೊಬ್ಬರು ಒಂದು ಧರ್ಮದ ಹಾಗೂ ಪಕ್ಷದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ಕಾರಣಕ್ಕೆ ಬಿಇಒ ನೋಟೀಸ್ ಜಾರಿ ಮಾಡಿರುವ ಘಟನೆ ಜರುಗಿದೆ.

Advertisement

ಶಾಲಾ ಶಿಕ್ಷಣ ಇಲಾಖೆಯ ವಿಜಯಪುರ ಗ್ರಾಮೀಣ ವಲಯದ ಬಿಇಒ ಬಬಲೇಶ್ವರ ತಾಲೂಕಿನ ತಿಗಣಿಬಿದರಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕ ಚಂದ್ರು ಮಾಳಿ ಎಂಬಾತನಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ನೀತಿಸಂಹಿತೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆ ಮಾಡಿದ್ದಾಗಿ ನೋಟೀಸ್ ದೂರಲಾಗಿದೆ.

ಆರೋಪಿ ಅತಿಥಿ ಶಿಕ್ಷಕ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಒಂದು ಧರ್ಮ ಹಾಗೂ ಪಕ್ಷದ ವಿರುದ್ಧ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ನೋಟೀಸ್ ಜಾರಿ ಮಾಡಲಾಗಿದೆ.

ಸದರಿ ನೋಟೀಸ್ ಗೆ ಮೂರು ದಿನಗಳಲ್ಲಿ ಲಿಖಿತ ಉತ್ತರ ನೀಡುವಂತೆ ಸೂಚಿಸಿದ್ದು, ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next