Advertisement
ಶುಕ್ರವಾರ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಲಧಾರೆ ಯೋಜನೆಯ ನೀಲನಕ್ಷೆ ತಯಾರಿಕೆ ಕುರಿತ ಸಮಾಲೋಚನಾ ಸಭೆಯಲ್ಲಿ ಈ ಮಾಹಿತಿ ನೀಡಿದ ಅವರು, ಜಲಧಾರೆ ಯೋಜನೆ ಒಂದು ಮಹತ್ವಾಕಾಂಕ್ಷೆಯ ಯೋಜನೆ. ವಿಜಯಪುರ, ಮಂಡ್ಯ, ಕೋಲಾರ ಹಾಗೂ ರಾಯಚೂರು ಜಿಲ್ಲೆಗಳನ್ನು ಮಾತ್ರ ಜಲಧಾರೆ ಪೈಲೆಟ್ ಯೋಜನೆಗೆ ಆಯ್ಕೆ ಮಾಡಲಾಗಿದೆ. ಜಲಧಾರೆ ಮೂಲಕ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವಲ್ಲಿ ರಾಜ್ಯ ಸರ್ಕಾರ ಆಶಯ ಹೊಂದಿದೆ. ಇದಕ್ಕಾಗಿ ಅತ್ಯಂತ ವ್ಯವಸ್ಥಿತವಾಗಿ, ವೈಜ್ಞಾನಿಕವಾಗಿ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು. ವಿಜಯಪುರ ಜಿಲ್ಲೆಯ ಜಲಧಾರೆ ಯೋಜನೆ ಅನುಷ್ಠಾನದ ಕರಡು ನೀಲನಕ್ಷೆ ಸಿದ್ದವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸರ್ವೇ ಕಾರ್ಯ ಆರಂಭಗೊಂಡಿದೆ. ಪ್ರಾಥಮಿಕ ಕರಡು ಮಾಹಿತಿ ವರದಿ ಹಾಗೂ ಯೋಜನೆ ಸಿದ್ಧಗೊಂಡಿದೆ. ಇದರಲ್ಲಿ ಇನ್ನೂ ಅಳವಡಿಸಬೇಕಿರುವ ಅಂಶಗಳ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ. ಸದರಿ ನೀಲ ನಕ್ಷೆಯ ಆಮೂಲಾಗ್ರ ಅಧ್ಯಯನದ ಬಳಿಕವೇ ಸಮಗ್ರ ವರದಿ ರೂಪಿಸುವುದಾಗಿ ಸ್ಪಷ್ಟಪಡಿಸಿದರು.
Advertisement
ಜಲಾಶಯಗಳಿಂದ ಹಳ್ಳಿಗಳಿಗೆ ಶುದ್ಧೀಕರಿಸಿದ ನೀರು: ಕೃಷ್ಣ ಬೈರೇಗೌಡ
10:44 AM Jul 06, 2019 | Naveen |
Advertisement
Udayavani is now on Telegram. Click here to join our channel and stay updated with the latest news.