Advertisement

ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

10:30 AM Jun 19, 2019 | Naveen |

ವಿಜಯಪುರ: ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ನಗರದ ಸಿದ್ದೇಶ್ವರ ದೇವಾಲಯದಿಂದ ಗಾಂಧಿ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Advertisement

ಈ ವೇಳೆ ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಪೃಥ್ವಿಕುಮಾರ ಮಾತನಾಡಿ, ಶಿಕ್ಷಣ ಸರ್ವರಿಗೂ ಸಿಗಬೇಕಾಗಿರುವ ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಕಲ್ಪನೆ ನಮ್ಮದು. ಜಾತಿ, ಮತ, ಬಡವ ಮತ್ತು ಶ್ರಿಮಂತನೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು. ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡುವುದಾಗಿ ಘೋಷಣೆ ಮಾಡಿದರೂ ಇದುವರೆಗೂ ಉಚಿತ ಬಸ್‌ಪಾಸ್‌ ನೀಡದ ಕ್ರಮ ಖಂಡನೀಯ ಎಂದರು.

2018-19ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಎಸ್‌ಸಿ-ಎಸ್‌ಟಿ ಸೇರಿದಂತೆ, ಉಳಿದ ವರ್ಗಗಳಿಗೂ ಉಚಿತ ಬಸ್‌ಪಾಸ್‌ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.

ಎಬಿವಿಪಿ ವಿಭಾಗ ಸಂಚಾಲಕ ಸಚಿನ ಕುಳಗೆರಿ ಮಾತನಾಡಿ, ರಾಜ್ಯ ಬರಗಾಲದ ಪರಿಸ್ಥಿತಿ ಎದುರಿಸುತ್ತಿದ್ದು ರೈತ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜುಗಳ ಡೋನೆಷನ್‌ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್‌ಪಾಸ್‌ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮಿಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಒತ್ತಾಯಿಸಿದರು.

ಹಳ್ಳಿಗಳಿಂದ ತಾಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ಕರ್ನಾಟಕ ರಾಜ್ಯ ಸರ್ಕಾರ ಈ ವರ್ಷವು ಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ. ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು ಎಂದರು.

Advertisement

ಪ್ರತಿಭಟನೆಯಲ್ಲಿ ಸಚಿನ ಬಾಗೇವಾಡಿ, ಪಾಂಡು ಮೊರೆ, ಮಣಿಕಂಠ ಹಿರೇಮಠ, ಶ್ರೀಧರ ಕಡಕೋಳ, ಅಮರ ಕಂಬಾರ, ವಿಠuಲ ಹಾಲಳ್ಳಿ, ಸೋಮನಾಥ ತೋಳನೂರ, ನಿರಂಜನ ಮಾಶ್ಯಾಳ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next