Advertisement

ವಿಜಯಪುರ ಸಿದ್ಧೇಶ್ವರ ಸಂಕ್ರಾಂತಿ ಜಾತ್ರೆ ರದ್ದು- ಧಾರ್ಮಿಕ ಕಾರ್ಯಕ್ಕೆ ಸೀಮಿತ

09:27 PM Dec 21, 2020 | mahesh |

ವಿಜಯಪುರ: ನಗರ ದೇವತೆ ಶ್ರೀ ಸಿದ್ದೇಶ್ವರ ಸಂಕ್ರಾಂತಿಯ 2021 ನಮ್ಮೂರ ಜಾತ್ರೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.

Advertisement

ಸೋಮವಾರ ನಗರದಲ್ಲಿ ಶ್ರೀಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ಜರುಗಿದ ಜಾತ್ರಾ ಸಮಿತಿ ಹಾಗೂ ಉಪ ಸಮಿತಿಯ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಜಾತ್ರೆ ರದ್ದು ಮಾಡಲು ನಿರ್ಧರಿಸಲಾಗಿದೆ.

ಜಾತ್ರೆ ರದ್ದಾದರೂ‌ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸರಳ ರೀತಿಯಲ್ಲಿ ಜಾತ್ರೆಯನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀ ಸಿದ್ಧೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next