Advertisement

Vijayapura: ಗ್ಯಾಸ್ ಕಟರ್ ಬಳಸಿ ಎಟಿಎಂ ನಲ್ಲಿ 3.60 ಲಕ್ಷ ರೂ. ದೋಚಿದ ಕಳ್ಳರು

11:02 PM Nov 06, 2023 | Team Udayavani |

ವಿಜಯಪುರ: ಸಿಸಿ ಕೆಮೆರಾಗೆ ಬಣ್ಣ ಬಳಿದು, ಗ್ಯಾಸ್ ಕಟರ್ ಬಳಸಿ ಎಟಿಎಂ ಕೇಂದ್ರದಿಂದ ಕಳ್ಳರು 3.60 ಲಕ್ಷ ರೂ. ದೋಚಿರುವ ಘಟನೆ ವರದಿಯಾಗಿದೆ.

Advertisement

ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದಲ್ಲಿರುವ ಇಂಡಿಯಾ ಒನ್ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರಕ್ಕೆ ನುಗ್ಗಿರುವ ಕಳ್ಳರು ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಮುರಿದು, ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.ಕೃತ್ಯ ನಡೆಸಿರುವ ಚಟುವಟಿಕೆ ಹಾಗೂ ತಮ್ಮ ಚಹರೆ ಪತ್ತೆಯಾಗದಂತೆ ಎಟಿಎಂ ಕೇಂದ್ರದಲ್ಲಿದ್ದ ಸಿ.ಸಿ. ಕೆಮೆರಾಗೆ ಬಣ್ಣದ ಸ್ಪ್ರೇ ಮೂಲಕ ಕೆಮೆರಾ ಮುಚ್ಚಿದ್ದಾರೆ.

ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.ಅಲ್ಲದೇ ಸಿಪಿಐ ರಾಯಗೊಂಡ ಜಾನರ ನೇತೃತ್ವದಲ್ಲಿ ಪರಾರಿಯಾಗಿರುವ ಕಳ್ಳರ ಶೋಧ ಕಾರ್ಯ ಆರಂಭಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next