Advertisement

Vijayapura: ಹಿರಿಯ ಪತ್ರಕರ್ತ ಮೋಹನ ತಿಳಗೂಳ ನಿಧನ

11:57 AM Mar 23, 2024 | keerthan |

ವಿಜಯಪುರ: ಹಿರಿಯ ಪತ್ರಕರ್ತ ಮೋಹನ ತಿಳಗೂಳ ವಯೋಸಹಜ ಕಾಯಿಲೆಯಿಂದ ಶನಿವಾರ ನಿಧನರಾಗಿದ್ದಾರೆ.

Advertisement

ಕಳೆದ ಹಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದಾಗಿ‌ ಹಾಸಿಗೆ ಹಿಡಿದಿದ್ದ 82 ವರ್ಷದ ಮೋಹನ, ಶನಿವಾರ ಬೆಳಿಗ್ಗೆ ನಿಧನರಾದರು.

ಮೃತ ಮೋಹನ ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಇಬ್ಬರು ಮಕ್ಕಳನ್ನು ಹಾಗೂ ಅಪಾರ ಬಂಧುಗಳು, ಶಿಷ್ಯ ಬಳಗವನ್ನು ಅಗಲಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ವರದಿಗಾರರಾಗಿದ್ದ ಮೋಹನ, ಸುಮಾರು ಒಂದೂವರೆ ದಶಕ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು. ನಗರದ ದರ್ಬಾರ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿದ್ದ ಮೋಹನ, ಅದೇ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದರು.

ಬೋಧನಾ ಸೇವೆಯಿಂದ ನಿವೃತ್ತರಾದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಆರಂಭಿಸಿದ್ದರು.

Advertisement

ಮೃತ ಮೊಹನ ತಿಳಗೂಳ ಅವರ ನಿಧನಕ್ಕೆ ಮೋಹನ ಅವರ ಶೈಕ್ಷಣಿಕ ಶಿಷ್ಯರಾಗಿದ್ದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೇರಿದಂತೆ ಜಿಲ್ಲೆಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next