Advertisement
ಬಬಲೇಶ್ವರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ ಹಾಗೂ ಬಬಲೇಶ್ವರ ಶಾಂತವೀರ ಕಾಲೇಜು ಎನ್ಎನ್ನೆಸ್ಸೆಸ್ ಘಟಕದ ಆಶ್ರಯದಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ತಾಲೂಕು ಆರೋಗ್ಯ ಅಧಿಕಾರಿ ಡಾ| ಕವಿತಾ ಮಾತನಾಡಿ, ಅನಾರೊಗ್ಯದ 10 ಮಕ್ಕಳನ್ನು ಹಡೆಯುವುದಕ್ಕಿಂತ ಆರೊಗ್ಯಯುತ ಒಂದು ಮಗು ದೇಶದ ಸಂಪತ್ತು ಆಗುತ್ತದೆ. ಆರೊಗ್ಯವಂತ ಒಂದು ಮಗುವಿನಿಂದ ದೇಶಕ್ಕೆ ಮಾರಕವಾಗುವಬಡತನ, ನಿರುದ್ಯೋಗ ಇವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕಾಗಿ ಟೋಬೇಕ್ಟಮಿ, ಲೇಪ್ರಸ್ಕೋಪಿಕ್, ಎನ್ಎಸ್ವಿ ವಿಧಾನಗಳನ್ನು ಹಾಗೂ ತಾತ್ಕಾಲಿಕ ವಿಧಾನಗಳಾದ ಐಯುಡಿ, ಒಪಿ, ನಿರೋಧ, ಚುಚ್ಚು ಮದ್ದುಗಳ ಬಗ್ಗೆ ತಿಳಿಸಿ ಇವುಗಳಿಂದ ಜನಸಂಖ್ಯೆ ನಿಯಂತ್ರಣ ಮಾಡಬಹುದು ಎಂದರು. ಮನೆಗೊಂದು ಮಗು ದೇಶಕ್ಕೆ ನಗು ಇದರಿಂದ ತಂದೆ ತಾಯಿ ಆರೋಗ್ಯದ ಜೊತೆಗೆ ಕುಟುಂಬ ಸಂತೋಷದಿಂದ ಇರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಬಲೇಶ್ವರ ಶಾಂತವೀರ ಕಾಲೇಜು ಪ್ರಾಂಶುಪಾಲ ವಿ.ಆರ್. ಚೌಧರಿ, ವಿಶ್ವದ ಜನಸಂಖ್ಯೆಯಲ್ಲಿ ಭಾರತ 2ನೇ ಪ್ರಬಲ ರಾಷ್ಟ್ರ ಎನಿಸಿದೆ. ಈಗಿರುವ ಅಂಕಿ ಅಂಶಗಳ ಏರಿಳಿತದ ಲೆಕ್ಕಾಚಾರಲದಲ್ಲಿ ಭಾರತ ದೇಶ ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವು ಅಪಾಯವೂ ಇದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣಕ್ಕೆ ತುರ್ತು ನಿರ್ಧಾರ ಕೈಗೊಳ್ಳಬೇಕಿದೆ. ಚಿಕ್ಕ ಸಂಸಾರದೊಂದಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಒಳ್ಳೆ ನಾಗರಿಕರನ್ನಾಗಿ ಮಾಡಲು ಪ್ರಯತ್ನ ಪಟ್ಟರೆ ಆ ಮಕ್ಕಳೆ ದೇಶದ ಸಂಪತ್ತು ಆಗುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದಕ್ಕೂ ಮುನ್ನ ನಗದಲ್ಲಿ ಹಮ್ಮಿಕೊಂಡಿದ್ದ ಜನಸಂಖ್ಯೆ ಜಾಗೃತಿ ಜಾಥಕ್ಕೆ ನಡೆಯಿತು. ಡಾ| ಎಂ.ಸಿ.ನಿಗಶೆಟ್ಟಿ ನಿರೂಪಿಸಿದರು.