Advertisement

Vijayapura14 ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ : ವಿನಯ ಕುಲಕರ್ಣಿ

05:07 PM Aug 19, 2023 | Shreeram Nayak |

ವಿಜಯಪುರ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರು ಅತೃಪ್ತಿ ಹೊಂದಿದ್ದಾರೆ. ಹೀಗಾಗಿ ಕಳೆದ ಚುನಾವಣೆಯಲ್ಲಿ ಸೋತವರೂ ಸೇರಿದಂತೆ 14 ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವರೂ ಆಗಿರುವ ಕಾಂಗ್ರೆಸ್ ಹಿರಿಯ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.

Advertisement

ಶನಿವಾರ ನಗರಕ್ಕೆ ಆಗಮಿಸಿದ್ದಾಗ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆಯಾದ ಬಹುತೇಕರು ಬೇಸರದಲ್ಲಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ಸೇರ್ಪಡೆ ಕುರಿತು ಬಿಜೆಪಿ ಪಕ್ಷದಲ್ಲಿ ಸೋತಿರುವ ಮಾಜಿ ಶಾಸಕರು ನಮ್ಮ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.

ರಾಜಕೀಯ ಅನುಭವಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ಸ್ವಾಗತಾರ್ಹ, ಏಕೆಂದರೆ ನಮ್ಮಿಬ್ಬರ ಮಧ್ಯೆ ಸ್ಪರ್ಧಾತ್ಮಕ ಸ್ಥಿತಿ ಇಲ್ಲ. ಅವರ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬಲ ಬರಲಿದೆ.

ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2 ಎ ಪ್ರವರ್ಗಕ್ಕೆ ಸೇರ್ಪಡೆಗೆ ಆಗ್ರಹಿಸುತ್ತೇವೆ. ಇದಕ್ಕಾಗಿ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದ್ದೇವೆ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next