Advertisement

ಅಂಗನವಾಡಿ-ಆಸ್ಪತ್ರೆ ಪರಿಶೀಲಿಸಿದ ವಿಜಯ್‌ಭಾಸ್ಕರ

02:37 PM Oct 01, 2019 | Team Udayavani |

ಹಿರೇಕೆರೂರ: ಸರ್ಕಾರಿ ಕಾರ್ಯದ ನಿಮಿತ್ತ ತಾಲೂಕಿಗೆ ಆಗಮಿಸಿದ್ದ ರಾಜ್ಯ ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿ ಟಿ.ಎಂ.ವಿಜಯ್‌ಭಾಸ್ಕರ ಅವರು ತಾವರಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಹಾಗೂ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ತಾಲೂಕಿನ ತಾವರಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ದಿಢೀರ್‌ ಭೇಟಿ ನೀಡಿ ಮುಖ್ಯಶಿಕ್ಷಕರಿಂದ ಮಕ್ಕಳಹಾಜರಾತಿ ಹಾಗೂ ಬಿಸಿ ಊಟ, ಮಕ್ಕಳ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಅಂಗನಾಡಿ ಕೇಂದ್ರದ ಮಕ್ಕಳಿಗೆ ಪ್ರಶ್ನೆಕೇಳಿ, ಅವರಿಂದ ಹಾಡು ಹಾಡಿಸಿದರು. ನಂತರ ಹಿರೇಕೆರೂರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆಯಶೌಚಾಲಯಗಳ ಸ್ವತ್ಛತೆ ಪರಿಶೀಲಿಸಿದಾಗ ಸ್ವಚ್ಛತೆ ಇಲ್ಲದನ್ನು ಕಂಡು ಬೇಸರ ವ್ಯಕ್ತಪಡಿಸಿದ ಅವರು, ಜಿಲ್ಲಾಧಿಕಾರಿಗಳ

ವಿಶೇಷ ಅನುದಾವನ್ನು ಬಳಸಿಕೊಂಡು ಕೂಡಲೇ ಶೌಚಾಲಯಗಳನ್ನು ಮರು ನಿರ್ಮಾಣ ಮಾಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯ, ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ತಹಶೀಲ್ದಾರ್‌ ಆರ್‌.ಎಚ್‌.ಭಾಗವಾನ, ತಾಪಂ ಇಒ ಶ್ರೀನಿವಾಸ ಎಚ್‌.ಜಿ., ಡಿಡಿಪಿಐ ಅಂದಾನೆಪ್ಪ ವಡಗೇರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಎಲ್‌.ಸಿದ್ದಲಿಂಗಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಜಗದೀಶ ಬಳಿಗಾರ, ಸಿಪಿಐ ಮಂಜುನಾಥ ಪಂಡಿತ ಇದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next