Advertisement

ಬಿಜೆಪಿಗೆ 15ಕ್ಕೆ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ

04:23 PM Nov 26, 2021 | Team Udayavani |

ಮಾಗಡಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕನಿಷ್ಠ 15 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಷತ್‌ ಚುನಾವಣೆ ಮುಂದಿನ ತಿಂಗಳು ನಡೆಯಲಿದ್ದು, ಕನಿಷ್ಠ 15 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದೇವೆ.

Advertisement

ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್‌ಕುಮಾರ್‌ ಕಟೀಲ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸೈ ಇತರೆ ನಾಯಕರೆಲ್ಲರೂ ಸೇರಿ ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಳ್ಳಲು ಪ್ರವಾಸ ಕಾರ್ಯಕ್ರಮ ರೂಪಿಸಿದ್ದಾರೆ. 30ರಿಂದ ಪ್ರವಾಸ ಕೈಗೊಂಡಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಬೀದರ್‌, ಬೆಂ. ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ;- ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ಜೊತೆಗೆ ಜನಸ್ವರಾಜ್‌ ಯಾತ್ರೆ ಮತ್ತು ಪಕ್ಷ ಸಂಘಟನೆ ಸಹ ನಡೆಯುತ್ತಿದೆ. ತಳಮಟ್ಟದಿಂದಲೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದೇ ತರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ನಾಯಕರಿಗೆ ತಿರುಗೇಟು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ನಮ್ಮ ಪಕ್ಷಕ್ಕೆ ಬೇರೆ ಪಕ್ಷದ ಊರುಗೋಲಿನ ಅವಶ್ಯಕತೆಯಿಲ್ಲ. ಸ್ವಂತ ಶಕ್ತಿ ಮೇಲೆ ನಮ್ಮ ಪಕ್ಷ ಗೆದ್ದು ಅಧಿಕಾರ ಹಿಡಿಯುತ್ತದೆ ಎಂದು ಕಾಂಗ್ರೆಸ್‌ ನಾಯಕರಿಗೆ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು.

Advertisement

ವೀರಾಪುರ ಅಭಿವೃದ್ಧಿ: ನಾಡಿನ ಸಹಸ್ರಕೋಟಿ ಜನರ ಕನಸು, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿಗೆ ಜನ್ಮಕೊಟ್ಟಿರುವ ವೀರಾಪುರದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸ ಆಗಬೇಕು ಮತ್ತು ಅಲ್ಲೊಂದು ಶಿವೈಕ್ಯ ಡಾ. ಶಿವಕುಮಾರಸ್ವಾಮೀಜಿ ಅವರ 108 ಅಡಿ ಎತ್ತರದ ಪ್ರತಿಮೆ ಸಹ ಆಗಬೇಕೆಂಬುದು ಮುಖ್ಯಮಂತ್ರಿಯಾಗಿದ್ದಾಗ ಬಿ. ಎಸ್‌.ಯಡಿಯೂರಪ್ಪ ಅವರ ಕನಸಾಗಿತ್ತು.

ಸರ್ಕಾರದಿಂದ ಹಣ ಸಹಾಯವನ್ನು ಸಹ ಮಾಡಿದ್ದಾರೆ. ಪರಿಷತ್‌ ಚುನಾವಣೆ ಮುಗಿದ ನಂತರ ನಾನೂ ಸಹ ವೀರಾಪುರಕ್ಕೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿ ಗಳನ್ನು ಸಂಪರ್ಕಿಸಿ ಕಾಮಗಾರಿಗೆ ಚುರುಕು ಮೂಡಿಸುವುದಾಗಿ ಹೇಳಿದರು.

ವೈಜ್ಞಾನಿಕ ಪರಿಹಾರಕ್ಕೆ ಚಿಂತನೆ: ಕರ್ನಾಟದಲ್ಲಿ ಆಗಿರುವ ಅತಿವೃಷ್ಟಿ ಸಂಬಂಧ ಸಿಎಂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಕ್ಷರಸಃ ರೈತರು ಸಂಕಷ್ಟದಲ್ಲಿ ದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂಕಷ್ಟಕೊಳಗಾಗಿ ರುವವರಿಗೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿಗಳೊಂದಿಗೆ ಸಿಎಂ ಚರ್ಚಿಸಿದ್ದಾರೆ. ನಷ್ಟಕೊಳ್ಳಗಾಗಿರುವ ಎಲ್ಲರಿಗೂ ವೈಜ್ಞಾನಿಕವಾಗಿ ಪರಿಹಾರ ಕೊಡಬೇಕೆಂಬ ಚಿಂತನೆಯನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ

 ಬಿಜೆಪಿ ಆಡಳಿತಕ್ಕೆ ಜನಮತ

ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಸಾಧಿಸಿ ಜನಪ್ರಿಯ ಗೊಂಡಿದೆ. ಪಕ್ಷದ ಆಡಳಿತದ ಕಾರ್ಯವೈಖರಿ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಸಹಿಸದ ವಿಪಕ್ಷದ ಕೆಲ ನಾಯಕರು ವ್ಯತಿರಿಕ್ತ ಆರೋಪ ಮಾಡಿ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ. ಇದಕ್ಕೆ ನಮ್ಮ ನಾಯಕರು ತಲೆಕೆಡಿಸಿ ಕೊಳ್ಳುವುದಿಲ್ಲ, ಜಾತ್ಯತೀತವಾಗಿ ಜನಪರ ಆಡಳಿತ ಕೊಡುವುದಷ್ಟೆ ನಮ್ಮ ಪಕ್ಷದ ತತ್ವ ಸಿದ್ಧಾಂತವಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಕೆಆರ್‌ಐಡಿಎಲ್‌ ಅಧ್ಯಕ್ಷ ಎಂ.ರುದ್ರೇಶ್‌, ಸಮಾಜ ಸೇವಕ ಮಹದೇವಶಾಸ್ತ್ರಿ, ಜಿಪಂ ಮಾಜಿ ಅಧ್ಯಕ್ಷ ಮರಿಸ್ವಾಮಿ, ಪುರಸಭಾ ಸದಸ್ಯರಾದ ಶಿವರುದ್ರಮ್ಮ ವಿಜಯಕುಮಾರ್‌, ಅನಿಲ್‌ಕುಮಾರ್‌, ರೇಖಾ ನವೀನ್‌ಕುಮಾರ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next