Advertisement

ಡಿಕೆಶಿ ಮೇಕೆದಾಟು ಯಾತ್ರೆಗೆ ಪ್ರತಿಯಾಗಿ ಸಿದ್ದರಾಮೋತ್ಸವ ಮಾಡಿದ್ದಾರೆ: ವಿಜಯೇಂದ್ರ ವ್ಯಂಗ್ಯ

03:01 PM Aug 08, 2022 | Team Udayavani |

ಶಿವಮೊಗ್ಗ: ಕಾಂಗ್ರೆಸ್ ನಲ್ಲಿ‌ ನ್ಯೂಟನ್ ನ ಮೂರನೇ ನಿಯಮ ಅಳವಡಿಕೆಯಾಗಿದೆ. ಕಾಂಗ್ರೆಸ್ ಪಕ್ಷದೊಳಗೆ ಕ್ರಿಯೆಗೆ ಪ್ರತಿಕ್ರಿಯೆ ಆಗುತ್ತಿದೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೇಕೆದಾಟು ಪಾದಯಾತ್ರೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಸಿದ್ದರಾಮಯ್ಯ ಇದೀಗ ಸಿದ್ದರಾಮೋತ್ಸವ ನಡೆಸಿ ಪ್ರತಿಕ್ರಿಯೆ ನೀಡುವ ಮೂಲಕ ತಮ್ಮ‌ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ‌ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ಶಿಕಾರಿಪುರದಲ್ಲಿ ಸುದ್ದಿಗಾರರೊಣದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿಯೇ‌ ಹಗ್ಗಜಗ್ಗಾಟ ಆರಂಭಗೊಂಡಿದೆ. ಹೀಗಾಗಿ ಬಿಜೆಪಿ ಆತಂಕಪಡುವ ಪ್ರಶ್ನೆಯೇ ಇಲ್ಲ ಎಂದರು.

ಇದನ್ನೂ ಓದಿ:ಕಾಮನ್ವೆಲ್ತ್ ಬಾಡ್ಮಿಂಟನ್: ಬಂಗಾರದ ಬರ ನೀಗಿಸಿದ ಪಿ.ವಿ.ಸಿಂಧು

ನಾನು ಶಾಸಕನಾಗಲು ಪಕ್ಷದ ಸಂಘಟನೆ ಮಾಡುತ್ತಿಲ್ಲ. ಪಕ್ಷದ ಜವಾಬ್ದಾರಿಯನ್ನು ಸಂತೃಪ್ತಿಯಿಂದ ಮಾಡುತಿದ್ದೇನೆ. ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರೇ ಸ್ಪರ್ಧಿಸಬೇಕು ಇಲ್ಲದಿದ್ದಲ್ಲಿ ವಿಜಯೇಂದ್ರ ಸ್ಪರ್ಧಿಸಬೇಕು ಎಂದು ಒತ್ತಡ ಹೇರಿದ್ದರು. ಶಿಕಾರಿಪುರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಯಾವ ಆಕಾಂಕ್ಷಿಗಳೂ ಇಲ್ಲ ಎಂದು ಹೇಳಿದ್ದರು. ಕಾರ್ಯಕರ್ತರ ಒತ್ತಡದ ಮೇರೆಗೆ ಯಡಿಯೂರಪ್ಪ ಅವರು ಶಿಕಾರಿಪುರದಿಂದ‌ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದರು. ಆದರೆ ಪಕ್ಷದ ಹಿರಿಯರು ಯಾವ ತೀರ್ಮಾನ ಕೈಗೊಳ್ಳುತ್ತಾರೆಯೊ ಆ ತೀರ್ಮಾನಕ್ಕೆ ಬದ್ಧನಾಗಿದ್ದೇನೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next