Advertisement

ಮಸ್ಕಿಯಲ್ಲಿ ಬಿಜೆಪಿ ‘ಪ್ರತಾಪ’ವಿಲ್ಲ : ಸೋಲಿನ ಬಗ್ಗೆ ಟ್ವೀಟ್ ಮಾಡಿದ ವಿಜಯೇಂದ್ರ

12:00 PM May 02, 2021 | Team Udayavani |

ಬೆಂಗಳೂರು : ಮಸ್ಕಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಸೋಲಿನ ಹತಾಶೆಯಿಂದ ಹೊರ ನಡೆದಿದ್ದಾರೆ. ಈ ಬಗ್ಗೆ  ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

Advertisement

ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ. ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ.

ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ. ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇನ್ನು ಪ್ರತಿ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಶುರುವಾಗಿತ್ತು. ಈ ಕಾರಣದಿಂದ ಬಿಜೆಪಿ ಬೆಂಬಲಿತ ಭಾಗದಲ್ಲೇ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರಿಂದ ಪ್ರತಾಪ ಗೌಡ ಸೋಲೊಪ್ಪಿಕೊಂಡು ಹೊರ ನಡೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next