Advertisement

BJP: ವಿಜಯೇಂದ್ರ ನೇಮಕ ಬಿಎಸ್‌ವೈ ಧೃತರಾಷ್ಟ್ರ ಪ್ರೇಮಕ್ಕೆ ಸಾಕ್ಷಿ: ಉಗ್ರಪ್ಪ

11:28 PM Nov 19, 2023 | Team Udayavani |

ಬಳ್ಳಾರಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯ ರಾಜಕಾರಣದ ಆಧುನಿಕ ಧೃತರಾಷ್ಟ್ರನಿದ್ದಂತೆ. ಒಬ್ಬ ಮಗನನ್ನು ಸಂಸದರನ್ನಾಗಿ ಮಾಡಿ, ಮತ್ತೂಬ್ಬ ಮಗನನ್ನು ಶಾಸಕನಾಗದಿದ್ದರೂ ಸಚಿವನಾಗಿಸಲು ಪ್ರಯತ್ನಿಸಿ, ಈಗ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಧೃತರಾಷ್ಟ್ರ ಪ್ರೇಮ ಮೆರೆದಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ವ್ಯಂಗ್ಯವಾಡಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವ ಧಿಯಲ್ಲಿ ಬಿ.ವೈ.ವಿಜಯೇಂದ್ರ ಅಧಿ ಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ದೇಶದ ರಕ್ಷಕ, ಚೌಕಿದಾರ್‌ ಎಂದೆಲ್ಲ ಹೇಳಿಕೊಳ್ಳುವ ಪ್ರಧಾನಿ ಮೋದಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಿಸಬೇಕು. ಇಲ್ಲದಿದ್ದರೆ ವಿಜಯೇಂದ್ರ ನೇಮಕ ಭ್ರಷ್ಟಾಚಾರಕ್ಕೆ ಪೂರಕವಾಗಿದೆ ಎಂದು ಜನ ಭಾವಿಸುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next