Advertisement

Vijaypur: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ವಶ

06:34 PM Apr 21, 2024 | Vishnudas Patil |

ವಿಜಯಪುರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಿಲ್ಲೆಯ ಪೊಲೀಸರು 50 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ.

Advertisement

ಖಚಿತ ಮಾಹಿತಿ ಮೇರೆಗೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ಸಂಚರಿಸುತ್ತಿದ್ದ ಕಾರನ್ನು ತಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದೇ ಅಕ್ರಮವಾಗಿ 50 ಲಕ್ಷ ರೂ. ಸಾಗಿಸುತ್ತಿರುವುದು ಬಯಲಾಗಿದೆ.

ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಹಾಗೂ 50 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಬಸವನಬಾಗೇಬಾಡಿ ತಹಶೀಲ್ದಾರ್ ಸೋಮನಕಟ್ಟಿ, ಮನಗೂಳಿ ಪಿಎಸ್‍ಐ ಶ್ರೀಕಾಂತ ಕಾಂಬಳೆ ಹಾಗೂ ಎಫ್.ಎಸ್.ಟಿ. ತಂಡದ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next