Advertisement

Vijaypura:ತಲೆಯ ಮೇಲೆ ಕಲ್ಲು ಎತ್ತಿಹಾಕಿ 27 ವರ್ಷದ ಯುವಕನ ಭೀಕರ ಹತ್ಯೆ

10:22 PM Apr 11, 2024 | Vishnudas Patil |

ವಿಜಯಪುರ : ಗುರುವಾರ ಸಂಜೆ ರಂಜಾನ್ ಹಬ್ಬಕ್ಕೆ ಸಂಬಂಧಿಯ ಮನೆಗೆ ಬಂದಿದ್ದ ಯುವಕನೊಬ್ಬ ಭೀಕರವಾಗಿ ಹತ್ಯೆಯಾಗಿದ್ದಾನೆ.

Advertisement

ನಗರದ ಪೇಟಿಬಾವಡಿ ನಿವಾಸಿ 27 ವರ್ಷದ ರಜೀನ್ ಜಮಾದಾರ ಎಂಬ ಯುವಕನೇ ಹತ್ಯೆಯಾದವನು. ನಗರದ ಜಾಮಿಯಾ ಮಸೀದಿ ಬಳಿ ರಜೀನ್ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಪದೇ ಪದೆ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗುತ್ತಿದ್ದ ಎರಡು ಗುಂಪುಗಳ ಮಧ್ಯದ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆಯಾಗಿದೆ ಎಂದು ಶಂಕಿಸಲಾಗಿದೆ.ಕುಟುಂಬ ಸದಸ್ಯರು ಹತ್ಯೆಗೆ ಸಂಬಂಧಿಸಿದಂತೆ ಕೆಲವರ ಹೆಸರನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಕೃತ್ಯ ನಡೆದ ಮಾಹಿತಿ ಬರುತ್ತಲೇ ಎಸ್ಪಿ ಋಷಿಕೇಶ ಭಗವಾನ್ ಸ್ಥಳಕ್ಕೆ ಧಾವಿಸಿದ್ದಾರೆ. ಹತ್ಯೆಯ ಕುರಿತು ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಲಿಖಿತ ದೂರು ಬಂದ ಬಳಿಕ‌ ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹತ್ಯೆಯ ಕುರಿತು ಗೋಲಗುಂಬಜ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next