Advertisement

ಸಚಿವರಾಗಿ ವಿಖೆ ಪಾಟೀಲ್‌

11:26 PM Jun 16, 2019 | Team Udayavani |

ಮುಂಬಯಿ: ಸಿಎಂ ದೇವೇಂದ್ರ ಫ‌ಡ್ನವೀಸ್‌ ನೇತೃತ್ವದ ಮಹಾರಾಷ್ಟ್ರ ಸರಕಾರದ ಸಂಪುಟ ವಿಸ್ತರಣೆ ರವಿವಾರ ನಡೆದಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್‌ನ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೇಲ್‌ ಅವರಿಗೂ ಸಚಿವ ಸ್ಥಾನ ನೀಡಲಾಗಿದೆ.

Advertisement

ವಿಖೆ ಪಾಟೀಲ್‌, ಬಿಜೆಪಿ ಅಧ್ಯಕ್ಷ ಆಶಿಶ್‌ ಶೇಲಾರ್‌ ಸೇರಿದಂತೆ ಒಟ್ಟು 8 ಮಂದಿಗೆ ಸಚಿವ ಸ್ಥಾನವನ್ನು ನೀಡಲಾಗಿದೆ. ಇದಲ್ಲದೆ ಐವರಿಗೆ ಕಿರಿಯ ಸಚಿವ ಸ್ಥಾನಗಳನ್ನು ಕೊಡಲಾಗಿದೆ. ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಗೆ ಇನ್ನೇನು 4 ತಿಂಗಳಷ್ಟೇ ಬಾಕಿ ಉಳಿದಿರುವಾಗ ಈ ಬೆಳವಣಿಗೆ ನಡೆದಿದೆ. ಮಹಾರಾಷ್ಟ್ರ ಸರಕಾರದ ಸಂಪುಟ ವಿಸ್ತರಣೆಯಾಗುತ್ತಿ ರುವುದು ಇದು 3ನೇ ಬಾರಿ.

Advertisement

Udayavani is now on Telegram. Click here to join our channel and stay updated with the latest news.

Next