Advertisement

ಯುವ ಕಾಂಗ್ರೆಸ್‌ನಿಂದ ಗ್ರಾಮ ಚಲೋ

07:30 AM Aug 08, 2017 | Team Udayavani |

ಮೂಡಬಿದಿರೆ: ನೆಲ್ಲಿಕಾರ್‌ ಗ್ರಾ.ಪಂ. ಮಾಜಿ ಅಧ್ಯಕ್ಷ ಹರೀಶ ಆಚಾರ್ಯರ ನಿವಾಸದಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ವತಿಯಿಂದ ಗ್ರಾಮ ಚಲೋ ಕಾರ್ಯಕ್ರಮ ನಡೆಯಿತು.

Advertisement

ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಮುಖ್ಯ ಅತಿಥಿಯಾಗಿ ಮಾತ ನಾಡಿ, ಬಡವರ ನೋವಿಗೆ ಸ್ಪಂದಿಸುವ ಕಾಂಗ್ರೆಸ್‌ ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿ ಗೊಳಿಸಬೇಕಾಗಿದೆ. ಹೆಚ್ಚು ಯುವಕರನ್ನು ಸೇರಿಸಿಕೊಂಡು ಪಕ್ಷವನ್ನು ಸಕ್ರಿಯಗೊಳಿಸ ಬೇಕಾಗಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಲೇರಿಯನ್‌ ಸಿಕ್ವೇರಾ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ  ಸುಪ್ರಿಯಾ ಡಿ. ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಹಾಸ್‌ ಸನಿಲ್‌, ಮಾಂಟ್ರಾಡಿ ರೈತ ಸಂಘದ ಅಧ್ಯಕ್ಷ ಪೌಲ್‌ ಡಿಸಿಲ್ವ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಅಶೋಕ್‌ ಕುಮಾರ್‌, ಕಾಂಗ್ರೆಸ್‌ ಮುಖಂಡರಾದ ರತ್ನಾಕರ ಮೊಲಿ, ಧನಂಜಯ್‌ ಆಳ್ವ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next