Advertisement

ಗ್ರಾಮ ಪಂಚಾಯಿತಿ ಪಿಡಿಒ-ಗುತ್ತಿಗೆದಾರ ಹೊಡೆದಾಟ

09:11 PM Jul 10, 2021 | Team Udayavani |

ಶಿಗ್ಗಾವಿ: ಗ್ರಾಪಂ ಪಿಡಿಒ ಹಾಗೂ ಗುತ್ತಿಗೆದಾರ ಪರಸ್ಪರ ಕೈ ಕೈ ಮಿಲಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡ ಘಟನೆ ತಾಲೂಕಿನ ಹಿರೇಮಲ್ಲೂರು ಗ್ರಾಪಂನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

Advertisement

ಹಿರೇಮಲ್ಲೂರು ಗ್ರಾಪಂ ಪಿಡಿಒ ಅಶೋಕ್‌ ಗೋಂದಿ ಹಾಗೂ ಗುತ್ತಿಗೆದಾರ ಮಂಜುನಾಥ ಕಂಕನವಾಡರ ಮಧ್ಯೆ ಗ್ರಾಪಂ ಗುತ್ತಿಗೆ ಕೆಲಸದ ವಿಷಯವಾಗಿ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸಿದ್ದಾರೆ. ಅಲ್ಲದೇ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಂತರ ವಿಷಯ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ರಾಜಿ ಸಂಧಾನ ಮಾಡಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ.

ಗುತ್ತಿಗೆ ಪಡೆದ ಮಂಜುನಾಥ್‌ ಕೆಲಸದ ವಿಷಯವಾಗಿ ವಿಚಾರಿಸಿದ್ದಾರೆ. ಆಗ ಪಿಡಿಒ ಅಶೋಕ್‌ ಗೋಂದಿ ಮಳೆಗಾಲವಿದೆ. ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿ ಇನ್ನೊಬ್ಬ ಗುತ್ತಿಗೆದಾರನಿಗೆ ಗುತ್ತಿಗೆ ಕೆಲಸ ಮಾಡಲು ಹೇಳಿ ನನಗೆ ಏಕೆ ಬೇಡ ಎನ್ನುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಆಗ ಪರಸ್ಪರ ಗಲಾಟೆ ನಡೆದಿದೆ ಎನ್ನಲಾಗಿದೆ. ಮೇಲಧಿಕಾರಿಗಳು ಗ್ರಾಪಂಗೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದು ತಪ್ಪಿತಸ್ಥ ಪಿಡಿಒ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next