Advertisement

ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ

12:20 PM Jan 01, 2022 | Team Udayavani |

ಪಿರಿಯಾಪಟ್ಟಣ: ಕಂಪಲಾಪುರ ಗ್ರಾ.ಪಂ.ವ್ಯಾಪ್ತಿಯ ಬೋರೆಹೊಸಳ್ಳಿ-ಹೊನ್ನೆಕೊಪ್ಪಲು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಗುದ್ದಲಿಪೂಜೆ ನೆರವೇರಿಸಿದರು.

Advertisement

ಈ ವೇಳೆ ಮಾತನಾಡಿದ ಅವರು ಗ್ರಾಮದ ಮೂಲಭೂತ ಸಮಸ್ಯೆಗಳನ್ನು ಹಂತಹಂತವಾಗಿ ಬಗೆ ಹರಿಸುವುದಾಗಿ ತಿಳಿಸಿದರು. ಗ್ರಾಮಸ್ಥರು ದೇವಾಲಯ, ರಸ್ತೆ ಅಭಿವೃದ್ದಿಗೆ ಅನುದಾನ, ನಿವೇಶನ ಹಾಗೂ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅದ್ಯಕ್ಷೆ ರಾಣಿ ಕೃಷ್ಣೇಗೌಡ ಪಂಚಾಯಿತಿ ಕಾರ್ಯದರ್ಶಿ ಆರ್.ಪಿ.ಸುಷ್ಮಾ , ಸದಸ್ಯರಾದ ಕವಿತಾ, ಗೌರಮ್ಮ, ಸಣ್ಣತಮ್ಮಯ್ಯ, ನಾಗರಜ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್, ಸಿಡಿಪಿಒ ಕುಮಾರ್, ಮುಖಂಡರಾದ ಈರಯ್ಯ , ಕೆ.ಕುಮಾರ್, ಕೆ.ಎಂ.ಲಕ್ಷ್ಮಣ್, ಚಂದ್ರು ಸೇರಿದಂತೆ ಮತ್ತಿತರರು ಹಾಜರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next