Advertisement

ಬಿಜೆಪಿ ಶಾಸಕರ ಕ್ಷೇತ್ರದಲ್ಲೂ ಗ್ರಾಮ ವಾಸ್ತವ್ಯ: ದೇವೇಗೌಡ

12:46 AM Jun 28, 2019 | Sriram |

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲೂ ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿ, ಗ್ರಾಮ ವಾಸ್ತವ್ಯ ಕೇವಲ ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಲ್ಲಷ್ಟೇ ಅಲ್ಲ. ಬಿಜೆಪಿ ಶಾಸಕರ ಕ್ಷೇತ್ರಗಳಲ್ಲೂ ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ಹೇಳಿದ್ದಾರೆ. ಕರೇಗುಡ್ಡದಲ್ಲಿ ಕುಮಾರಸ್ವಾಮಿ ಗ್ರಾಮವಾಸ್ತವ್ಯ ವೇಳೆ ಬಿಜೆಪಿ ಶಾಸಕರು ಅಡ್ಡಿ ಪಡಿಸಿದ್ದಾರೆ.

ಮೊದಲು ನಮ್ಮ ಪಕ್ಷದಲ್ಲೇ ಇದ್ದವರು ಅವರು. ನಾನು ಆ ಬಗ್ಗೆ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಜನರೇ ಆ ಬಗ್ಗೆ ಎಲ್ಲವನ್ನೂ ಗಮನಿಸುತ್ತಾರೆ, ಉತ್ತರವನ್ನೂ ಕೊಡುತ್ತಾರೆ ಎಂದರು. ರೇವಣ್ಣ ಗ್ರಾಮ ವಾಸ್ತವ್ಯ ಮಾಡ್ತೀನಿ ಅಂದಿದ್ದಾರೆ. ಉಪ ಮುಖ್ಯಮಂತ್ರಿ ಪರಮೇಶ್ವರ್‌ ಸೇರಿ ಕಾಂಗ್ರೆಸ್‌ನವರು ಗ್ರಾಮ ವಾಸ್ತವ್ಯಕ್ಕೆ ತೀರ್ಮಾನಿಸಿದ್ದಾರೆ. ಇದೊಂದು ಉತ್ತಮ ಕಾರ್ಯ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next