Advertisement

ಗ್ರಾಮ ವಾಸ್ತವ್ಯ ತಪ್ಪೇನಲ್ಲ: ಬಾಲಚಂದ್ರ

10:34 PM Jun 22, 2019 | Lakshmi GovindaRaj |

ಬೆಳಗಾವಿ: ಎಚ್‌.ಡಿ. ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ಮಾಡುತ್ತಿರುವುದರಲ್ಲಿ ತಪ್ಪೇನಿಲ್ಲ. ಆದರೆ, ಅವರು ವಾಸ್ತವ್ಯ ಮಾಡಿದ ಗ್ರಾಮಗಳು ಎಲ್ಲ ರೀತಿಯಿಂದ ಅಭಿವೃದ್ಧಿ ಹೊಂದಬೇಕು. ಇದು ಎಲ್ಲ ಜನರ ನಿರೀಕ್ಷೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡುವ ಸಂದರ್ಭ ಅಲ್ಲಿನ ಹಾಗೂ ಸುತ್ತಲಿನ ಗ್ರಾಮಗಳ ಜನರಿಂದ ಸಾಕಷ್ಟು ಬೇಡಿಕೆಗಳು ಸಲ್ಲಿಕೆಯಾಗುತ್ತವೆ. ಅವೆಲ್ಲದರ ಪರಿಹಾರಕ್ಕೆ ಮುಖ್ಯಮಂತ್ರಿಗಳು ಮುಂದಾಗಬೇಕು. ಇದರಿಂದ ಗ್ರಾಮಗಳ ಅಭಿವೃದ್ಧಿ ಆಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next