Advertisement

ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ: ಗ್ರಾಮಸ್ಥರ ಒತ್ತಾಯ

02:57 PM Feb 22, 2021 | Team Udayavani |

ಮಾಸ್ತಿ: ನೆರೆಯ ತಮಿಳುನಾಡು ಗಡಿಗೆ ಹೊಂದಿ ಕೊಂಡಿರುವ ಮಾಸ್ತಿ ಹೋಬಳಿಯ ಗೊಡಗಹಳ್ಳಿ ಗ್ರಾಮದಲ್ಲಿ ಮಾಲೂರು ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹಲವಾರು ಸಮಸ್ಯೆಗಳು ಅನಾವರಣಗೊಂಡ ಪ್ರಸಂಗ ನಡೆಯಿತು.

Advertisement

ತಹಶೀಲ್ದಾರ್‌ ಎಂ.ಮಂಜುನಾಥ್‌ ನೇತೃತ್ವದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹದಗೆಟ್ಟ ರಸ್ತೆ, ಕೆಲವು ಮೂಲ ಸೌಲಭ್ಯ ಕೊರತೆಸೇರಿದಂತೆ ಹಲವಾರು ಸಮಸ್ಯೆಗಳ ಜೊತೆಗೆ ಕಾಡುಪ್ರಾಣಿಗಳ ಹಾವಳಿಯಿಂದ ಆತಂಕದಲ್ಲೇ ಜೀವನ ನಡೆಸುತ್ತಿರುವ ಗ್ರಾಮಸ್ಥರು, ತಾವು ಎದುರಿಸುತ್ತಿ ರುವ ಸಮಸ್ಯೆಗಳ ಕುರಿತು ಅಧಿಕಾರಿಗಳ ಮುಂದೆಅನಾವರಣಗೊಳಿಸುವ ಮೂಲಕ ಗಮನ ಸೆಳೆದರು.

ಇಂದಿಗೂ ಬಸ್‌ ಸೌಕರ್ಯ ಕೇಳುವ ದುಸ್ಥಿತಿ:  ದಿನ್ನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷೆ ಮಮತಾರೆಡ್ಡಿ ಮಾತನಾಡಿ, ಕಾಡಾನೆ, ಕರಡಿ, ಚಿರತೆ ಸೇರಿದಂತೆ ಮತ್ತಿತರ ಕಾಡು ಪ್ರಾಣಿಗಳ ಹಾವಳಿ ಈ ಭಾಗದಲ್ಲಿ ಸಾಮಾನ್ಯವಾಗಿದೆ. ಆನೆ ಕಾರಿಡಾರ್‌ ನಿರ್ಮಾಣ ಮತ್ತಿತರ ಮೂಲಕ ಶಾಶ್ವತ ಪರಿಹಾರ ಕೈಗೊಳ್ಳುವುದಾಗಿ ಹೇಳಲಾಗುತ್ತಿದೆಯಾದರೂ, ಅನುಷ್ಠಾನಕ್ಕೆ ಬಂದಿಲ್ಲ. ಬಸ್‌ ವ್ಯವಸ್ಥೆಗಾಗಿ ಕೇಳುವ ದುಸ್ಥಿತಿ ಬಂದೊದಗಿದೆ ಎಂದರು.

ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಗಡಿ ಗ್ರಾಮವಾದ ಗೊಡಗಹಳ್ಳಿ ಗ್ರಾಮಕ್ಕೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರದಿಂದ ರೈತರು, ಬಡ ಜನತೆಗೆ ಸಿಗುವಸವಲತ್ತುಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಶಾಸಕ ಕೆ.ವೈ.ನಂಜೇಗೌಡ ತಾಕೀತು ಮಾಡಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮಧ್ಯಾಹ್ನದ ನಂತರ ಆಗಮಿಸಿ ಗೊಡಗಹಳ್ಳಿಯಲ್ಲಿ ಸಂಚರಿಸಿ,ಸಮಸ್ಯೆಗಳನ್ನು ಆಲಿಸಿ ನಂತರ ಮಾತನಾಡಿದ ಅವರು, ಗೊಡಗಹಳ್ಳಿಯಲ್ಲಿ ಕಾಡಾನೆಗಳು ಸೇರಿದಂತೆ ಕಾಡು ಪ್ರಾಣಿಗಳಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸರ್ಕಾರಕ್ಕೆ ಸಮರ್ಪಕವಾದ ಮಾಹಿತಿ ನೀಡಿ ಸಹಕರಿಸುವಂತೆ ಸ್ಥಳದಲ್ಲಿದ್ದ ಅರಣ್ಯಾಧಿಕಾರಿ ಸುಧಾಕರ ಅವರಿಗೆ ಸೂಚನೆ ನೀಡಿದಕ್ಕೆ, ಕಾಡಾನೆಗಳ ಹಾವಳಿ ತಪ್ಪಿಸಲು ಬ್ಯಾರಿಕೇಡ್‌ ನಿರ್ಮಾಣಕ್ಕೆ ಪ್ರಸ್ತಾವನೆ ಅರಣ್ಯ ಇಲಾಖೆಗೆ ಸಲ್ಲಿಸಲಾಗಿದೆ. ಕೋವಿಡ್‌ಕಾರಣದಿಂದಾಗಿ ಅನುದಾನ ಬಿಡುಗಡೆಯಾಗಿಲ್ಲ ಎಂದು ಉತ್ತರ ನೀಡಿದರು.

ತಹಶೀಲ್ದಾರ್‌ ಎಂ.ಮಂಜುನಾಥ್‌, ತಾಪಂ ಇಒ ಕೃಷ್ಣಪ್ಪ, ಜಿಪಂ ಸದಸ್ಯ ಎಚ್‌.ವಿ.ಶ್ರೀನಿವಾಸ್‌, ಗ್ರಾಪಂ ಅಧ್ಯಕ್ಷೆ ಉಮಾ ಜಲಂಧರ್‌, ಉಪಾಧ್ಯಕ್ಷೆಸುಧಾ, ತಾಲೂಕು ವೈದ್ಯಾಧಿಕಾರಿ ಡಾ.ಪ್ರಸನ್ನ,ಡಿಸಿಸಿ ಬ್ಯಾಂಕ್‌ ನಿರ್ದೇಶಕ ಚನ್ನರಾಯಪ್ಪ, ಸಹಾಯಕ ಕೃಷಿ ನಿರ್ದೇಶಕ ಚಂದ್ರಪ್ಪ, ಬಿಇಒಕೃಷ್ಣಮೂರ್ತಿ, ಜಿಪಂ ಎಇಇ ವೆಂಕಟೇಶ್‌, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

ಹಾವು ಪ್ರತ್ಯಕ್ಷ: ಶಾಸಕ ಕೆ.ವೈ.ನಂಜೇಗೌಡ ಅವರು ಗ್ರಾಮದಲ್ಲಿ ಸಂಚರಿಸಿ, ಕಾರ್ಯಕ್ರಮದ ವೇದಿಕೆಯಲ್ಲಿ ಕುಳಿತು ಮಾತನಾಡುತ್ತಿದ್ದಂತೆಸ್ಥಳದಲ್ಲಿ ಹಾವು ಪ್ರತ್ಯಕ್ಷಗೊಂಡು ನೆರೆದಿದ್ದವರಲ್ಲಿಆತಂಕಕ್ಕೆ ಕಾರಣವಾಯಿತು. ಅರಣ್ಯ ಅಧಿಕಾರಿಗಳು ಹಾವು ಹಿಡಿದು ಹೊರಗೆ ಬಿಟ್ಟ ಪ್ರಸಂಗ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next