Advertisement

ಗ್ರಾಮ ಸ್ವರಾಜ್ಯ ಕಾರ್ಯಕ್ರಮ: ನ.29ರಂದು ಅಶ್ವತ್ಥನಾರಾಯಣ,ನಳಿನ್‍ ಚಿಕ್ಕಬಳ್ಳಾಪುರಕ್ಕೆ ಭೇಟಿ

08:17 PM Nov 28, 2020 | Mithun PG |

ಚಿಕ್ಕಬಳ್ಳಾಪುರ: ಜಿಲ್ಲೆಗೆ ನವೆಂಬರ್-29 ರಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸಮೇತ ಬಿಜೆಪಿ ಮುಖಂಡರು ಭೇಟಿ ನೀಡಲಿದ್ದಾರೆ.

Advertisement

ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡುತ್ತಿರುವ ಮುಖಂಡರು ಬೆಳಿಗ್ಗೆ ಚಿಕ್ಕಬಳ್ಳಾಪುರ ನಗರದ ಸಿದ್ದೇಶ್ವರ ಸಮುದಾದಾಯ ಭವನಕ್ಕೆ  ಭೇಟಿ ನೀಡಿ ಬಳಿಕ ಜಿಲ್ಲೆಯ ಬಾಗೇಪಲ್ಲಿ ತಾಲೂಕಿಗೆ ತೆರಳಿದ್ದಾರೆ. ಅಲ್ಲಿ ಚಿಕ್ಕಬಳ್ಳಾಪುರ,ಗೌರಿಬಿದನೂರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಬಳಿಕ ಚಿಂತಾಮಣಿ ತಾಲೂಕಿಗೆ ತೆರಳಿ ಅಲ್ಲಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ ಮಧುಚಂದ್ರ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿಗಳು ಮತ್ತು ಪಕ್ಷದ ರಾಜ್ಯಾಧ್ಯಕ್ಷರೊಂದಿಗೆ ಸಚಿವ ಕೋಟಾ ಶ್ರೀನಿವಾಸ್, ಉಡುಪಿ ಚಿಕ್ಕಮಗಳೂರು ಸಂಸದರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ ಮತ್ತಿತರರು ಭೇಟಿ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಥಳೀಯ ರೈಲುಗಳಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣಿಸುವವರ ಸಂಖ್ಯೆಯಲ್ಲಿ ಹೆಚ್ಚಳ!

ಇದನ್ನೂ ಓದಿ:  ಮಲೆ ಮಾದಪ್ಪನ ದರ್ಶನ ಪಡೆದು ಕಾಲ್ನಡಿಗೆಯಲ್ಲಿಯೇ ನಾಗಮಲೆಗೆ ತೆರಳಿದ ಯತೀಂದ್ರ ಸಿದ್ಧರಾಮಯ್ಯ

Advertisement
Advertisement

Udayavani is now on Telegram. Click here to join our channel and stay updated with the latest news.

Next