Advertisement

Channapatna; ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

12:27 PM Mar 04, 2024 | Team Udayavani |

ರಾಮನಗರ: ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದಲ್ಲಿ ರಸ್ತೆ ಕಿತ್ತು ವರ್ಷಗಳು ಕಳೆದರೂ ಡಾಂಬಾರು ಹಾಕಿಲ್ಲ. ಜಲ್ಲಿ ಹಾಕಿ ಹಾಗೆ ಬಿಟ್ಟಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ಪಕ್ಕ ಇರುವ ಮನೆಗಳಿಗೆ ಪ್ರತಿನಿತ್ಯ ಧೂಳು ತುಂಬಿಕೊಂಡು ಅನಾರೋಗ್ಯ ಕಾಡುತ್ತಿದೆ ಎಂದು ಆರೋಪಿಸಿದ್ದಾರೆ. ರಸ್ತೆ ಗುತ್ತಿಗೆ ಪಡೆದ ಗುತ್ತಿಗೆದಾರ ರಸ್ತೆಗೆ ಡಾಂಬಾರು ಹಾಕುವ ಕೆಲಸ ಮಾಡಿಲ್ಲ. ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ದರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next