Advertisement

ಯೋಗೀಶ್‌ ಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ರದ್ದು

09:43 PM Mar 17, 2021 | Team Udayavani |

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯೋಗೀಶ್‌ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿ ಆದೇಶಿಸಿದೆ.

Advertisement

ಪ್ರಕರದಲ್ಲಿ ಜಾಮೀನು ನೀಡುವಂತೆ ಕೋರಿ ಆರೋಪಿ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಗೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ರಾಜಕೀಯ ಕಾರಣಗಳಿಗಾಗಿ ಹತ್ಯೆ ನಡೆದಿದೆ. ಜಿಮ್‌ ನಿಂದ ಹೊರ ಬರುವ ವೇಳೆ ಯೋಗೀಶ್‌ ಗೌಡ ಹತ್ಯೆ ನಡೆದಿತ್ತು. ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಕೊಲೆ ಮಾಡಿರದ ಆರೋಪಿಗಳು ಬಂದು ತಾವೇ ಕೊಲೆ ಮಾಡಿರುವುದಾಗಿ ಶರಣಾಗಿದ್ದರು.

ಕೊಲೆ ನೋಡಿದ್ದ ಪ್ರತ್ಯಕ್ಷ ಸಾಕ್ಷಿಗಳನ್ನು ಅರ್ಜಿದಾರರು ಬೆದರಿಸಿ ಪ್ರಕರಣದಿಂದ ದೂರ ಉಳಿಯುವಂತೆ ನೋಡಿಕೊಂಡಿದ್ದರು. ಅದಕ್ಕೆ ಸ್ಥಳೀಯ ಪೊಲೀಸರು ಹಾಗೂ ವಿನಯ್‌ ಸಂಬಂಧಿಗಳು ನೆರವು ನೀಡಿದ್ದರು. ಈ ಎಲ್ಲ ಅಂಶಗಳು ಸಿಬಿಐ ತನಿಖೆ ವೇಳೆ ಪತ್ತೆಯಾಗಿವೆ ಎಂದು ಸಿಬಿಐ ಆಕ್ಷೇಪಣೆ ಸಲ್ಲಿಸಿತ್ತು. ಸಿಬಿಐ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್‌ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್‌ ಮಾಜಿ ಸಚಿವ ವಿನಯ್‌ ಕುಲಕರ್ಣಿಯ ಜಾಮೀನು ಅರ್ಜಿ ತಿರಸ್ಕರಿಸಿದೆ.

ಇದನ್ನೂ ಓದಿ :ನವದೆಹಲಿ ಜಗತ್ತಿನ ನಂ.1 ಕಲುಷಿತ ರಾಜಧಾನಿ! ಸತತ 3ನೇ ಬಾರಿಗೆ ಈ ಅಪಖ್ಯಾತಿ

ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಕಳೆದ ನ. 5ರಂದು ಬಂಧನಕ್ಕೆ ಒಳಗಾಗಿರುವ ಮಾಜಿ ಶಾಸಕ ವಿನಯ್‌ ಕುಲಕರ್ಣಿ ಮೊದಲಿಗೆ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಸಿಗದೆ ಹಿನ್ನಲೆಯಲ್ಲಿ ಧಾರವಾಡ ಹೈಕೋರ್ಟ್‌ ಪೀಠದಲ್ಲಿಯೂ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಕೂಡ ಜಾಮೀನು ನಿರಾಕರಿಸಿತ್ತು. ಆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ಪ್ರಕರಣ ವರ್ಗಾವಣೆಯಾಗುತ್ತಲೇ ಮೂರನೇ ಬಾರಿ ಜಾಮೀನು ಕೋರಿ ವಿನಯ್‌ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಗಂಭೀರತೆ ಹಾಗೂ ಸಿಬಿಐ ಆಕ್ಷೇಪಣೆಗಳನ್ನು ಪುರಸ್ಕರಿಸಿರುವ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ. ಪ್ರಸ್ತುತ ವಿನಯ್‌ ಕುಲಕರ್ಣಿ 5 ತಿಂಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next